Breaking News

ಹಲಾಲ್​-ಜಟ್ಕಾ ಮಧ್ಯ ಇಲ್ಲಿ ಗುಡ್ಡೆ ಮಾಂಸದ್ದೇ ಸದ್ದು; ಹೊಸ ತೊಡಕಿಗೆ ತೊಡಕಿಲ್ಲ..

Spread the love

ಮಂಡ್ಯ: ಯುಗಾದಿ ಹಬ್ಬದ ಮರುದಿನ ಹಲವೆಡೆ ಹೊಸತೊಡಕು ಎಂದು ಆಚರಿಸುತ್ತಾರೆ. ಆ ದಿನ ಭರ್ಜರಿ ಮಾಂಸದಡುಗೆ ಮಾಡಿ ಸವಿಯುತ್ತಾರೆ, ಇನ್ನು ಕೆಲವೆಡೆ ಮೋಜಿಗಾಗಿ ಇಸ್ಪೀಟ್​ನಂಥ ಆಟವೂ ನಡೆಯುತ್ತದೆ. ಈ ಮಧ್ಯೆ ರಾಜ್ಯದಲ್ಲಿ ಮಾಂಸಕ್ಕೆ ಸಂಬಂಧಿಸಿದಂತೆ ಹಲಾಲ್​-ಜಟ್ಕಾ ಸಂಘರ್ಷ ಉಂಟಾಗಿದ್ದು, ನಾಳೆ ಹೊಸ ತೊಡಕಿಗೆ ಯಾರಿಗೆ ಹೆಚ್ಚು ವ್ಯಾಪಾರ, ಯಾರು ಎಲ್ಲಿ ಮಾಂಸ ಖರೀದಿಸಲಿದ್ದಾರೆ ಎಂಬುದು ಕೂಡ ಕುತೂಹಲ ಕೆರಳಿಸಿದೆ.

 

ಈ ಮಧ್ಯೆ ಮಂಡ್ಯದಲ್ಲಿ ಗುಡ್ಡೆ ಮಾಂಸಕ್ಕೆ ಭರ್ಜರಿ ಬೇಡಿಕೆ ಉಂಟಾಗಿದೆ. ಅದಕ್ಕಾಗಿ ನಾಲ್ಕೈದು ದಿನಗಳ ಮೊದಲೇ ಬುಕಿಂಗ್ ನಡೆಯುತ್ತಿದೆ. ಸಕ್ಕರೆ ನಾಡು ಮಂಡ್ಯದ ಹಳ್ಳಿಹಳ್ಳಿಗಳಲ್ಲೂ ಗುಡ್ಡೆ ಮಾಂಸ ಮಾರಾಟಕ್ಕೆ ಸಜ್ಜಾಗಿದ್ದಾರೆ.

ಹಲಾಲ್ ಕಟ್ ಮತ್ತು ಜಟ್ಕಾ ಕಟ್ ಘರ್ಷಣೆ ನಡುವೆಯೂ ಗುಡ್ಡೆ ಮಾಂಸ ಭರ್ಜರಿ ಸದ್ದು ಮಾಡುತ್ತಿದೆ. ಈಗಾಗಲೇ ಕಟ್ ಮಾಡಿ ಗುಡ್ಡೆ ಹಾಕಲಾರಂಭಿಸಿರುವ ವ್ಯಾಪಾರಿಗಳು ಬುಕ್ ಮಾಡಿದವರಿಗೆ ಮೊದಲ ಆದ್ಯತೆ ಎನ್ನಲಾರಂಭಿಸಿದ್ದಾರೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ