Breaking News

ಸಣ್ಣ, ಅತಿ ಸಣ್ಣ ರೈತರಿಗೆ ಗುಡ್ ನ್ಯೂಸ್

Spread the love

ಬೆಂಗಳೂರು: ಭೂಕಂದಾಯ ಕಾಯ್ದೆಯಲ್ಲಿನ ಲೋಪದಿಂದಾಗಿ ಶಿಕ್ಷೆಗೆ ಗುರಿಯಾಗುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದೆ.

ಭೂಗಳ್ಳರು ಮತ್ತು ಸಣ್ಣ ಕೃಷಿಕರಿಗೆ ಸಮಾನ ಶಿಕ್ಷೆಯನ್ನು ನಿವಾರಣೆ ಮಾಡಿ ಭೂ ಒತ್ತುವರಿ ಮತ್ತು ಭೂಕಬಳಿಕೆ ಪ್ರತ್ಯೇಕಗೊಳಿಸಿ ರೈತರ ರಕ್ಷಣೆಗಾಗಿ ಕಾನೂನಿಗೆ ತಿದ್ದುಪಡಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.

 

ಸಾಗುವಳಿದಾರರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಒತ್ತುವರಿ ಮತ್ತು ಭೂಕಬಳಿಕೆ ಪ್ರತ್ಯೇಕ ಮಾಡಲಾಗುವುದು. ಜೀವನ ನಡೆಸಲು ಒತ್ತುವರಿ ಮಾಡಿಕೊಂಡಿರುವ ಮತ್ತು ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಕಬಳಿಕೆ ಮಾಡುವ ಆರೋಪಿಗಳನ್ನು ಒಂದೇ ಕಾನೂನಿನಡಿ ಶಿಕ್ಷಿಸುವುದನ್ನು ತಪ್ಪಿಸಲು ಒತ್ತುವರಿ ಮತ್ತು ಭೂಕಬಳಿಕೆ ಪ್ರತ್ಯೇಕಗೊಳಿಸಲು ಕಾನೂನು ತಿದ್ದುಪಡಿಗೆ ಸರ್ಕಾರ ಕ್ರಮ ಕೈಗೊಂಡಿದೆ.

ಇದಕ್ಕಾಗಿ ಕಂದ ಭೂ ಕಂದಾಯ ಕಾಯ್ದೆ ಸೆಕ್ಷನ್ 192(ಎ) ಗೆ ತಿದ್ದುಪಡಿ ಮಾಡಿ ಭೂಕಬಳಿಕೆಯಿಂದ ಪಾರಂಪರಿಕ ಒತ್ತುವರಿಯನ್ನು ಪ್ರತ್ಯೇಕಗೊಳಿಸಲಾಗುವುದು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ