Breaking News

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಇಂದು ಬೆಳಗಾವಿ ಆರ್‌ಎಸ್ಎಸ್ ಕಚೇರಿಗೆ ಭೇಟಿ

Spread the love

ಬೆಳಗಾವಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಇಂದು ಬೆಳಗಾವಿಯ ಆರ್‌ಎಸ್ಎಸ್ ಕಚೇರಿಗೆ ಭೇಟಿ ನೀಡಿದ್ದರು. ಬೆಳಗಾವಿಯ ಶಾಸ್ತ್ರಿನಗರದಲ್ಲಿರುವ ಆರ್‌ಎಸ್ಎಸ್ ಕಚೇರಿಗೆ ಭೇಟಿ ನೀಡಿದ ಸಿಎಂ ಪ್ರಮೋದ್​ ಸಾವಂತ್ ಮುಖಂಡರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಪ್ರಮೋದ್​ ಸಾವಂತ್ ಬೆಳಗಾವಿಗೆ ಆಗಮಿಸಿದ್ದಾರೆ.

ಆರ್‌ಎಸ್ಎಸ್ ಮುಖಂಡರ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್ ಸಾವಂತ್, 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲೇ ಹೋದರೂ ಆರ್‌ಎಸ್ಎಸ್ ಕಚೇರಿಗೆ ಭೇಟಿ ಕೊಡುತ್ತೇನೆ. ಅದೇ ರೀತಿ ಇಲ್ಲಿಯೂ ಭೇಟಿ ನೀಡಿದ್ದೇನೆ.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ