Breaking News

ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆ

Spread the love

 

ಹುಬ್ಬಳ್ಳಿ: ಕಳೆದ ಒಂದೆರಡು ದಿನಗಳ ಹಿಂದೆಯಷ್ಟೇ ವಾಣಿಜ್ಯನಗರಿ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವೊಂದು ಪತ್ತೆಯಾಗಿತ್ತು.

ಅಪರಿಚಿತ ಶವ ಎಂದು ಸರ್ಕಾರ ನಿರ್ದೇಶನದ ಮೇರೆಗೆ ಶವ ಸಂಸ್ಕಾರ ಮಾಡಲಾಗಿತ್ತು. ಆದರೆ, ಇಂದು ಮಧ್ಯಾಹ್ನ ಬಿಡನಾಳ ರುದ್ರಭೂಮಿಯಲ್ಲಿ ಉಪವಿಭಾಗಾಧಿಕಾರಿಗಳ ಉಪಸ್ಥಿತಿಯೊಂದಿಗೆ ಮುಜಾಫರ್ ಕಲಾದಗಿ ಎಂಬುವವರ ಶವ ಹೊರ ತೆಗೆಯಲಾಯಿತು.

ನಗರದಲ್ಲಿ ಕೆಲವು ದಿನಗಳ ಹಿಂದೆ ಕೊಳೆತ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಶವಗಾರದಲ್ಲಿ ಇಟ್ಟುಕೊಳ್ಳಲು ವೈದ್ಯರು ನಿರಾಕರಿಸಿದ್ದರಿಂದ ಪಾಲಿಕೆಯ ರುದ್ರಭೂಮಿಯಲ್ಲಿ ಶವಸಂಸ್ಕಾರ ಮಾಡಲಾಗಿತ್ತು. ಆದರೆ, ಈಗ ಏಕಾಏಕಿ ವಾರಸುದಾರರು ಆಗಮಿಸಿದ್ದರಿಂದ ಶವವನ್ನು ಹೊರತೆಗೆದು ಬಂಧುಗಳಿಗೆ ತೋರಿಸಲಾಯಿತು. ಈ ವೇಳೆ ತಹಶೀಲ್ದಾರ್​ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ