Breaking News

ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಮಗುವಿನ ಸ್ಥಿತಿ ಗಂಭೀರ

Spread the love

ತುಮಕೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.

ಇಂತಹ ಭೀಕರ ಅಪಘಾತ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಭವಿಸಿದೆ.

ಕಾರಿನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಕಟ್ಟಿಗೇನಗಹಳ್ಳಿ ಗೇಟ್ ಬಳಿ ರಸ್ತೆಬದಿ ಲಾರಿಯೊಂದು ನಿಂತಿತ್ತು. ತುಮಕೂರು ಕಡೆಯಿಂದ ಶಿರಾದತ್ತ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ