Breaking News

ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಮಗುವಿನ ಸ್ಥಿತಿ ಗಂಭೀರ

Spread the love

ತುಮಕೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.

ಇಂತಹ ಭೀಕರ ಅಪಘಾತ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಭವಿಸಿದೆ.

ಕಾರಿನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಕಟ್ಟಿಗೇನಗಹಳ್ಳಿ ಗೇಟ್ ಬಳಿ ರಸ್ತೆಬದಿ ಲಾರಿಯೊಂದು ನಿಂತಿತ್ತು. ತುಮಕೂರು ಕಡೆಯಿಂದ ಶಿರಾದತ್ತ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


Spread the love

About Laxminews 24x7

Check Also

ಧಾರವಾಡ ಕೃಷಿ ವಿವಿಯಲ್ಲಿ 2018ರಿಂದ ಇಲ್ಲಿಯವರೆಗೆ ಲೆಕ್ಕಪರಿಶೋಧನೆ ನಡೆಸಲು ಸಿಎಜಿಗೆ ಹೈಕೋರ್ಟ್ ಸೂಚನೆ

Spread the loveಬೆಂಗಳೂರು: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅನರ್ಹ ವ್ಯಕ್ತಿಯೊಬ್ಬರು ಕಳೆದ 2018ರಿಂದ ಕಂಟ್ರೋಲರ್‌ ಹುದ್ದೆ ನಿರ್ವಹಿಸಿರುವ ಅಂಶವನ್ನು ಗಂಭೀರವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ