Breaking News

ಗುತ್ತಿಗೆದಾರ ಸಂತೋಷ್‌ ಪಾಟೀಲ್ ಆತ್ಮಹತ್ಯೆ : ಉಡುಪಿಗೆ ಆಗಮಿಸಿದ ಕುಟುಂಬಿಕರು

Spread the love

ಉಡುಪಿ: ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಉಡುಪಿಯ ಖಾಸಗಿ ಲಾಡ್ಜ್‌ ನಲ್ಲಿ ಆತ್ಮಹತ್ಯೆದ ಗುತ್ತಿಗೆದಾರ ಸಂತೋಷ್‌ ಪಾಟೀಲ್ ಅವರ ಕುಟುಂಬಿಕರು ಮಂಗಳವಾರ ತಡರಾತ್ರಿ ಉಡುಪಿಗೆ ಆಗಮಿಸಿದರು.

ಬೆಂಗಳೂರಿಂದ ಮತ್ತು ಬೆಳಗಾವಿಯಿಂದ ಬಂದಿರುವ ಸಹೋದರರು ಸೇರಿದಂತೆ ಎಂಟು ಮಂದಿ ಕುಟುಂಬಿಕರು ಘಟನೆ ನಡೆದ ಖಾಸಗಿ ಲಾಡ್ಜ್‌ ಗೆ ಆಗಮಿಸಿ ನೇರವಾಗಿ ಆತ್ಮಹತ್ಯೆ ಮಾಡಿಕೊಂಡ ರೂಮ್‌ ನಂಬರ್‌ 207 ತೆರಳಿದರು.

 

ನಾವು ಬಾರದೆ ಯಾವುದೇ ತನಿಖೆ ಮುಂದುವರೆಸಬೇಡಿ ಎಂದು ಹೇಳಿದ್ದ ಕಾರಣ ಕಳೆದ 12 ಗಂಟೆಗೂ ಅಧಿಕ ಕಾಲದಿಂದ ಸಹೋದರರ ಬರುವಿಕೆಗಾಗಿ ಉಡುಪಿ ಪೊಲೀಸರು ಕಾದಿದ್ದರು.

ಸದ್ಯ ಸಂತೋಷ್‌ ಪಾಟೀಲ್‌ ಕುಟುಂಬಿಕರು ಉಡುಪಿಗೆ ಆಗಮಿಸಿದ್ದು ಅಧಿಕೃತವಾಗಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಬಳಿಕ ಬುಧವಾರ ಬೆಳಗ್ಗೆ ಶವದ ಪಂಚನಾಮೆ ಮತ್ತು ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ