Breaking News

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು

Spread the love

ಉಡುಪಿ: ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಉಡುಪಿ ನಗರ ಠಾಣೆಯಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಎಫ್‍ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರಡಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ.ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಈಶ್ವರಪ್ಪ ವಿರುದ್ಧ ಸಂತೋಷ್ ಸಹೋದರ ಪ್ರಶಾಂತ್ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಸಂತೋಷ್ ಸಾವಿಗೆ ಕಮಿಷನ್ ಕಾಟವೇ ಕಾರಣ ಎಂದು ಉಲ್ಲೇಖಿಸಿದ್ದಾರೆ. ಸಂತೋಷ್ ಅವರು ಹಿಂಡಲಗಾ ದೇವಿ ಜಾತ್ರೆ ಕಾಮಗಾರಿ ವಹಿಸಿಕೊಂಡಿದ್ದರು. ಕಾಮಗಾರಿಯ 4 ಕೋಟಿ ಬಿಲ್ ಮಂಜೂರು ಮಾಡಲು ಸಂತೋಷ್ ಕೇಳಿದ್ದರು. ಆದರೆ ಈ ಬಿಲ್ ಮಂಜೂರು ಮಾಡಲು 40% ಕಮಿಷನ್ ಬೇಡಿಕೆಯಿಟ್ಟಿದ್ದರು. ಇದೀಗ ಕಮಿಷನ್ ಆರೋಪಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಸಂತೋಷ್ ಸಹೋದರ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ

Spread the love88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ