Breaking News

ಬದುಕಬೇಕೆಂದಿದ್ದರೆ ಕಾಶ್ಮೀರ ಬಿಟ್ಟು ಹೋಗಿ

Spread the love

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸದ್ಯ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ತಕ್ಷಣವೇ ಸ್ಥಳಬಿಟ್ಟು ತೆರಳಬೇಕು. ಬದುಕಬೇಕೆಂದಿದ್ದರೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎಂದು ಹೇಳುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

 

ಇದರಿಂದಾಗಿ 1990ರ ದಶಕದಲ್ಲಿ ಉಂಟಾಗಿದ್ದಂತೆ ಕಾಶ್ಮೀರ ಪಂಡಿತರನ್ನು ಉಗ್ರವಾದಿಗಳ ಗುಂಪು ಗುರಿ ಮಾಡಿಕೊಂಡು ಕೊಂದು ಹಾಕುವ ಪರಿಸ್ಥಿತಿ ಮತ್ತೆ ತಲೆದೋರಿತೇ ಎಂಬ ಪ್ರಶ್ನೆ ಎದುರಾಗಿದೆ.

ಬಾರಾಮುಲ್ಲಾ ಜಿಲ್ಲೆಯಲ್ಲಿಯೇ ಸಕ್ರಿಯವಾಗಿರುವ ಸ್ಥಳೀಯ ಉಗ್ರ ಸಂಘಟನೆ ಲಷ್ಕರ್‌-ಇ-ಇಸ್ಲಾಂ ವಲಸಿಗರು ಇರುವ ಶಿಬಿರಗಳ ಸಮೀಪವೇ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ