Breaking News

ಈ ನಾಲ್ಕು ಇಲಾಖೆಗಳಲ್ಲೇ ಹೆಚ್ಚು ಎಸಿಬಿ ರೇಡ್!

Spread the love

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಳೆದ 5 ವರ್ಷಗಳಲ್ಲಿ ಕೈಗೊಂಡ ದಾಳಿಗಳ ಪೈಕಿ ಶೇ.51 ದಾಳಿಗಳು ಕಂದಾಯ, ನಗರಾಭಿವೃದ್ಧಿ, ಸಾರಿಗೆ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ್ದಾಗಿವೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಕಳೆದ 5 ವರ್ಷಗಳಲ್ಲಿ ಎಸಿಬಿ 58 ದಾಳಿಗಳನ್ನು ನಡೆಸಿ ಕೋಟ್ಯಂತರ ರೂ.

ಭ್ರಷ್ಟಾಚಾರ ಬಯಲಿಗೆಳೆದಿದೆ. ನಗರಾಭಿವೃದ್ಧಿ-40, ಸಾರಿಗೆ-33 ಹಾಗೂ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಮೇಲೆ 29 ದಾಳಿಗಳನ್ನು ನಡೆಸಿದೆ. ಕಳೆದ 5 ವರ್ಷಗಳಲ್ಲಿ ಎಸಿಬಿಯಲ್ಲಿ ಅಕ್ರಮ ಆಸ್ತಿ ಕೇಸ್​ಗೆ (ಡಿಎ) ಸಂಬಂಧಿಸಿದಂತೆ 310 ದಾಳಿ ಪ್ರಕರಣ ದಾಖಲಾಗಿದ್ದು, 371 ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಬಿಸಿ ಮುಟ್ಟಿಸಿದೆ. ಈ ಪೈಕಿ 63 ಕೇಸ್​ಗಳಲ್ಲಿ ತನಿಖೆ ಮುಕ್ತಾಯಗೊಂಡಿದ್ದು, 223 ಪ್ರಕರಣಗಳಲ್ಲಿ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಒಟ್ಟು 1,803 ಪ್ರಕರಣ: ದಾಳಿಗೊಳಗಾದ ಅಧಿಕಾರಿಗಳು ಆದಾಯಕ್ಕಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಆಸ್ತಿ ಹೊಂದಿರುವುದಕ್ಕೆ ಸಾಕ್ಯ್ಷಾಧಾರಗಳು ಪತ್ತೆಯಾದರೂ, ಬೆರಳೆಣಿಕೆಯಷ್ಟು ಅಧಿಕಾರಿಗಳಿಗೆ ಶಿಕ್ಷೆಯಾಗಿದೆ. 2016ರಿಂದ ಇದುವರೆಗೆ ಎಸಿಬಿಯಲ್ಲಿ ಒಟ್ಟು 1,803ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 650ಕ್ಕೂ ಹೆಚ್ಚಿನ ಕೇಸ್​ಗಳು ಇನ್ನೂ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ. 85 ಪ್ರಕರಣಗಳಲ್ಲಿ ತನಿಖೆ ನಡೆಸಲು ನ್ಯಾಯಾಲಯಗಳಲ್ಲಿ ತಡೆಯಿದೆ. 1,473ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಎಸಿಬಿ ದಾಳಿಗೊಳಗಾದ 1,335 ಮಂದಿ ಸರ್ಕಾರಿ ನೌಕರರು ಸೇವೆಯಿಂದ ಅಮಾನತುಗೊಂಡಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

Spread the loveಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ