Breaking News

ಬರೀ ರೌಡಿಸಂ ತೋರಿಸಿ ಸಮಾಜವನ್ನು ಹಾಳು ಮಾಡುತ್ತಿದ್ದೀರಾ?: KGF-2 ಬಗ್ಗೆ ಭಾಸ್ಕರ್​ ರಾವ್​ ಅಸಮಾಧಾನ

Spread the love

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಾಪ್ಟರ್​-2 ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಆದರೆ, ಕೆಜಿಎಫ್​ ಚಾಪ್ಟರ್​ 2 ಚಿತ್ರದ ಬಗ್ಗೆ ಮಾಜಿ ಪೊಲೀಸ್​ ಆಯುಕ್ತ ಹಾಗೂ ಆಮ್​ ಆದ್ಮಿ ಪಕ್ಷದ ನಾಯಕ ಭಾಸ್ಕರ್​ ರಾವ್​ ಅಸಮಾಧಾನವನ್ನು ಹೊರಹಾಕಿದ್ದಾರೆ.

 

ಬೆಂಗಳೂರಿನ ಪಾರ್ಟಿ ಕಚೇರಿಯಲ್ಲಿ ಮಾತನಾಡಿರುವ ಭಾಸ್ಕರ್​ ರಾವ್​, ನಿಮ್ಮ ಸಿನಿಮಾ ಮತ್ತು ಹೀರೋ ಪ್ರಖ್ಯಾತಿ ಇರಬಹುದು. ಆದರೆ, ನಾನು ಈ ಸಿನಿಮಾವನ್ನು ಒಪ್ಪುವುದಿಲ್ಲ. ಸಿನಿಮಾದಲ್ಲಿ ಏನು ತೋರಿಸ್ತೀರಾ ನೀವು? ಬರೀ ರೌಡಿಸಂ ತೋರಿಸಿ ಸಮಾಜವನ್ನು ಹಾಳು ಮಾಡುತ್ತಿದ್ದೀರಾ?

ಬರಿ ಮಚ್ಚು, ಇಷ್ಟುದ್ದ ಗಡ್ಡ ಬಿಟ್ಕೊಂಡು, ಬೆವತುಕೊಂಡು, ಒಂದು ರೀತಿಯಲ್ಲಿ ವರ್ಕೌಟ್​ ಮಾಡಿ ಅಸಹ್ಯ ರೀತಿಯಲ್ಲಿ ತೋರಿಸುತ್ತೀರಾ, ಏನಾದರೂ ಒಂದು ಸಾಧನೆ ತೋರಿಸಿ ಎಂದು ಹೆಸರೇಳದೆ ಪರೋಕ್ಷವಾಗಿ ಕೆಜಿಎಫ್​-2 ಚಿತ್ರವನ್ನು ಟೀಕಿಸಿದರು. ಅಲ್ಲದೆ, ಇಂತಹ ಸಿನಿಮಾ ಕನ್ನಡದ ಹೆಮ್ಮೆಯಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ