Breaking News

ಬರೀ ರೌಡಿಸಂ ತೋರಿಸಿ ಸಮಾಜವನ್ನು ಹಾಳು ಮಾಡುತ್ತಿದ್ದೀರಾ?: KGF-2 ಬಗ್ಗೆ ಭಾಸ್ಕರ್​ ರಾವ್​ ಅಸಮಾಧಾನ

Spread the love

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಾಪ್ಟರ್​-2 ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಆದರೆ, ಕೆಜಿಎಫ್​ ಚಾಪ್ಟರ್​ 2 ಚಿತ್ರದ ಬಗ್ಗೆ ಮಾಜಿ ಪೊಲೀಸ್​ ಆಯುಕ್ತ ಹಾಗೂ ಆಮ್​ ಆದ್ಮಿ ಪಕ್ಷದ ನಾಯಕ ಭಾಸ್ಕರ್​ ರಾವ್​ ಅಸಮಾಧಾನವನ್ನು ಹೊರಹಾಕಿದ್ದಾರೆ.

 

ಬೆಂಗಳೂರಿನ ಪಾರ್ಟಿ ಕಚೇರಿಯಲ್ಲಿ ಮಾತನಾಡಿರುವ ಭಾಸ್ಕರ್​ ರಾವ್​, ನಿಮ್ಮ ಸಿನಿಮಾ ಮತ್ತು ಹೀರೋ ಪ್ರಖ್ಯಾತಿ ಇರಬಹುದು. ಆದರೆ, ನಾನು ಈ ಸಿನಿಮಾವನ್ನು ಒಪ್ಪುವುದಿಲ್ಲ. ಸಿನಿಮಾದಲ್ಲಿ ಏನು ತೋರಿಸ್ತೀರಾ ನೀವು? ಬರೀ ರೌಡಿಸಂ ತೋರಿಸಿ ಸಮಾಜವನ್ನು ಹಾಳು ಮಾಡುತ್ತಿದ್ದೀರಾ?

ಬರಿ ಮಚ್ಚು, ಇಷ್ಟುದ್ದ ಗಡ್ಡ ಬಿಟ್ಕೊಂಡು, ಬೆವತುಕೊಂಡು, ಒಂದು ರೀತಿಯಲ್ಲಿ ವರ್ಕೌಟ್​ ಮಾಡಿ ಅಸಹ್ಯ ರೀತಿಯಲ್ಲಿ ತೋರಿಸುತ್ತೀರಾ, ಏನಾದರೂ ಒಂದು ಸಾಧನೆ ತೋರಿಸಿ ಎಂದು ಹೆಸರೇಳದೆ ಪರೋಕ್ಷವಾಗಿ ಕೆಜಿಎಫ್​-2 ಚಿತ್ರವನ್ನು ಟೀಕಿಸಿದರು. ಅಲ್ಲದೆ, ಇಂತಹ ಸಿನಿಮಾ ಕನ್ನಡದ ಹೆಮ್ಮೆಯಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ