Breaking News

ಬಂಡೀಪುರದಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ವ್ಯಕ್ತಿ ಪಾರು

Spread the love

ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಲು ಯತ್ನಿಸಿರುವ ಘಟನೆ ನಡೆದಿದ್ದು, ಕೂದಲೆಳೆಯಿಂದ ಪಾರಾಗಿ ಪ್ರಾಣ ಉಳಿದಿದೆ.

 

ಮದ್ದೂರು ವಲಯದ ಬ್ರಿಡ್ಜ್ ಹತ್ತಿರ ಎಡಭಾಗದಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜಿಸಲು ಬಲ ಭಾಗಕ್ಕೆ ಹೋಗಿದ್ದಾಗ ಆನೆ ಬರುವುದನ್ನು ಕಂಡು ಜತೆಯಲ್ಲಿ ಇದ್ದವರು ಕಾರು ಹತ್ತಿದ್ದಾರೆ. ಬಳಿಕ ಕೆರಳಿದ ಆನೆ ಬಲ ಭಾಗದಲ್ಲಿ ಇದ್ದ ವ್ಯಕ್ತಿಯ ಮೇಲೆ ದಾಳಿ ಮಾಡಲು ಯತ್ನಿಸಿ ಅಟ್ಟಿಸಿಕೊಂಡು ಹೋದಾಗ ವ್ಯಕ್ತಿ ಎಡ ಬದಿಯಲ್ಲಿದ್ದ ಕಾರಿನತ್ತ ಓಡಿ ಹೋಗಿದ್ದಾನೆ. ಕಾರಿನ ಬಾಗಿಲ ಬಳಿ ಹೋಗುತ್ತಿದ್ದಂತೆ ಬಿದ್ದಿದ್ದಾನೆ.ಕೂಡಲೇ ಕಾರಿನಲ್ಲಿದ್ದವರು ಒಳಗೆ ಎಳೆದುಕೊಂಡಿದ್ದಾರೆ. ಕ್ಷಣಾರ್ಧದಲ್ಲಿ ಪ್ರಾಣ ಉಳಿದಿದೆ. ಎಲ್ಲಾ ಘಟನೆಯನ್ನು ಹಿಂಬದಿಯ ಕಾರಿನಲ್ಲಿದ್ದವರು ಚಿತ್ರೀಕರಿಸಿ ಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣ ಮಾಡುವ ಪ್ರವಾಸಿಗರು ಇಂತಹ ತಪ್ಪನ್ನು ಆಗಿಂದಾಗ್ಗೆ ಮಾಡುತ್ತಲೇ ಇದ್ದಾರೆ. ಹೀಗಿದ್ದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ