Breaking News

ನಿನ್ನೆ ವಸಿಂ ಪಠಾಣ್ ನನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ, ಗಲಭೆ ಮಾಡಿಸಿದ್ದು ನಾನೇ ಎಂದು ಹೇಳಿದ್ದಾನೆಂದ

Spread the love

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಸಿಂ ಪಠಾಣ್, ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ಗಲಭೆ ಮಾಡಿಸಿದ್ದು ನಾನೇ ಎಂದು ಹೇಳಿದ್ದಾನೆಂದು ತಿಳಿದುಬಂದಿದೆ

ನಿನ್ನೆ ವಸಿಂ ಪಠಾಣ್ ನನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ.

ಖಾಕಿ ಡ್ರಿಲ್ ಗೆ ಸತ್ಯ ಬಾಯ್ಬಿಟ್ಟ ವಸಿಂ ಪಠಾಣ್, ತಾನೇ ವಾಟ್ಸಪ್ ಗ್ರೂಪ್ ರಚಿಸಿದ್ದಾಗಿ ಹಾಗೂ ಪೊಲೀಸರು ಬಗ್ಗದೇ ಹೋದರೆ ಪ್ರತಿಭಟನೆ ಮಾಡೋಣ ಎಂದು ಹೇಳಿದ್ದಾಗಿ ತಿಳಿಸಿದ್ದಾನೆ.

ವಾಸಿಂ ಬೇಪಾರಿ, ತುಫೆಲ್ ಮುಲ್ಲಾ ಜತೆ ಸೇರಿ ಗಲಭೆಗೆ ಪ್ರಚೋದನೆ ನೀಡಿದ್ದಾಗಿ ಹೇಳಿದ್ದಾನೆ. ಆದರೆ ಗಲಭೆ ಜಾಗದಲ್ಲಿ ಸಂಗ್ರಹವಾಗಿದ್ದ ಕಲ್ಲುಗಳ ಬಗ್ಗೆ ತನಗೆ ಗೊತ್ತಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ