Breaking News

2 ಲಕ್ಷ ಹುದ್ದೆ ಖಾಲಿ ಇದ್ದರೂ ಕಡಿಮೆಯಾಗದ ದಕ್ಷತೆ: ಬಸವರಾಜ ಬೊಮ್ಮಾಯಿ

Spread the love

ಶಿವಮೊಗ್ಗ: ಪ್ರಸ್ತುತ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡು ಅಧಿಕಾರಿಗಳು, ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನೌಕರರ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನೌಕರರ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಸರ್ಕಾರಿ ನೌಕರರ ಸಂಘ ಶಿವಮೊಗ್ಗದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ನೌಕರರಿಗೆ ಹಲವಾರು ಸೌಲಭ್ಯಗಳನ್ನು ನೀಡಲಾಗಿದೆ. ದೇಶದಲ್ಲೇ ರಾಜ್ಯ ಸರ್ಕಾರಿ ನೌಕರರು ದಕ್ಷ ಅಧಿಕಾರಿಗಳು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೆ ಹಲವಾರು ದಶಕಗಳಿಂದ ಸೇವೆ ಸಲ್ಲಿಸಿದ ಹಿರಿಯ ಸರ್ಕಾರಿ ಅಧಿಕಾರಿ, ನೌಕರರ ಶ್ರಮವೂ ಕಾರಣ. ಈ ಪರಂಪರೆ ಮುಂದುವರಿಸುವ ಕರ್ತವ್ಯ, ನೈತಿಕ ಜವಾಬ್ದಾರಿ ನೌಕರರ ಮೇಲಿದೆ. ಜವಾಬ್ದಾರಿಯನ್ನು ಸ್ಪಷ್ಟವಾಗಿ ತಿಳಿದುಕೊಂಡರೆ ಕರ್ತವ್ಯಕ್ಕೆ ನ್ಯಾಯ ಒದಗಿಸಬಹುದು. ಕಾನೂನಿಗೆ ಅನುಗುಣವಾಗಿಯೇ ನಡೆದರೂ, ಕೆಲವೊಮ್ಮೆ ವಿವೇಚನಾಧಿಕಾರ ಬಳಿಸಿ, ಬಡವರ ಶ್ರೇಯಕ್ಕೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ