Breaking News

29 ಅಡಿ ತೇರು ಕಟ್ಟಿದ ಅಂಧ ಸೋದರರು!

Spread the love

ಕುಷ್ಟಗಿ (ಕೊಪ್ಪಳ): ಅಪ್ಪನ ಅಕಾಲಿಕ ಸಾವಿನಿಂದಾಗಿ ಹೆಗಲೇರಿದ 29 ಅಡಿ ಎತ್ತರದ ತೇರು ನಿರ್ಮಾಣ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸಿದ ಸೋದರರಿಬ್ಬರ ಸಾಧನೆಯ ಕತೆ ಇದು. ಈ ಇಬ್ಬರೂ ಅಂಧರಾದರೂ, ಕೇವಲ ಸ್ಪರ್ಶಜ್ಞಾನದಿಂದಲೇ ಕಟ್ಟಿಗೆಯಲ್ಲಿ ವಿವಿಧ ಚಿತ್ತಾರ ಬಿಡಿಸುವಲ್ಲಿ ಪರಿಣತಿ ಸಾಧಿಸಿರುವುದು ವಿಶೇಷ.

 

ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಬೇಲೂರಿನ ಸುರೇಶ ಮತ್ತು ಮಹೇಶ ಬಡಿಗೇರ ಅವರೇ ಈ ಸಾಹಸಿಗರು. ಇವರ ತಂದೆ ಮಲ್ಲಪ್ಪ ಬಿಡಗೇರ ರಾಜ್ಯ ಪ್ರಶಸ್ತಿ ಪುರಸ್ಕೃತ ರಥಶಿಲ್ಪಿ. ಇವರ ಕಲೆಯ ಅರಿವಿದ್ದ ಪಟ್ಟಲಚಿಂತಿ ಗ್ರಾಮಸ್ಥರು ತಮ್ಮೂರಿನ ಮಾರುತೇಶ್ವರ ದೇವಸ್ಥಾನಕ್ಕೆ ತೇರು ನಿರ್ವಿುಸಿಕೊಡುವಂತೆ ಕೇಳಿಕೊಂಡಿದ್ದರು. ಈ ಸಂಬಂಧ ಒಪ್ಪಂದವೂ ಆಗಿತ್ತು. ಆದರೆ ಒಪ್ಪಂದವಾದ ಕೆಲವೇ ದಿನಗಳಲ್ಲಿ ರಥಶಿಲ್ಪಿ ನಿಧನರಾದರು. 2018ರಲ್ಲಿ ಒಪ್ಪಂದ ಏರ್ಪಟ್ಟ ಬಳಿಕ ಒಂದು ವರ್ಷದಲ್ಲಿ ಮಕ್ಕಳು ತೇರು ನಿರ್ವಿುಸಿಕೊಟ್ಟಿದ್ದಾರೆ. ಈ ತೇರನ್ನು ಏ.16ರ ಜಾತ್ರಾ ಮಹೋತ್ಸವದಲ್ಲಿ ಕೊಪ್ಪಳದ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ