Breaking News

29 ಅಡಿ ತೇರು ಕಟ್ಟಿದ ಅಂಧ ಸೋದರರು!

Spread the love

ಕುಷ್ಟಗಿ (ಕೊಪ್ಪಳ): ಅಪ್ಪನ ಅಕಾಲಿಕ ಸಾವಿನಿಂದಾಗಿ ಹೆಗಲೇರಿದ 29 ಅಡಿ ಎತ್ತರದ ತೇರು ನಿರ್ಮಾಣ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸಿದ ಸೋದರರಿಬ್ಬರ ಸಾಧನೆಯ ಕತೆ ಇದು. ಈ ಇಬ್ಬರೂ ಅಂಧರಾದರೂ, ಕೇವಲ ಸ್ಪರ್ಶಜ್ಞಾನದಿಂದಲೇ ಕಟ್ಟಿಗೆಯಲ್ಲಿ ವಿವಿಧ ಚಿತ್ತಾರ ಬಿಡಿಸುವಲ್ಲಿ ಪರಿಣತಿ ಸಾಧಿಸಿರುವುದು ವಿಶೇಷ.

 

ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಬೇಲೂರಿನ ಸುರೇಶ ಮತ್ತು ಮಹೇಶ ಬಡಿಗೇರ ಅವರೇ ಈ ಸಾಹಸಿಗರು. ಇವರ ತಂದೆ ಮಲ್ಲಪ್ಪ ಬಿಡಗೇರ ರಾಜ್ಯ ಪ್ರಶಸ್ತಿ ಪುರಸ್ಕೃತ ರಥಶಿಲ್ಪಿ. ಇವರ ಕಲೆಯ ಅರಿವಿದ್ದ ಪಟ್ಟಲಚಿಂತಿ ಗ್ರಾಮಸ್ಥರು ತಮ್ಮೂರಿನ ಮಾರುತೇಶ್ವರ ದೇವಸ್ಥಾನಕ್ಕೆ ತೇರು ನಿರ್ವಿುಸಿಕೊಡುವಂತೆ ಕೇಳಿಕೊಂಡಿದ್ದರು. ಈ ಸಂಬಂಧ ಒಪ್ಪಂದವೂ ಆಗಿತ್ತು. ಆದರೆ ಒಪ್ಪಂದವಾದ ಕೆಲವೇ ದಿನಗಳಲ್ಲಿ ರಥಶಿಲ್ಪಿ ನಿಧನರಾದರು. 2018ರಲ್ಲಿ ಒಪ್ಪಂದ ಏರ್ಪಟ್ಟ ಬಳಿಕ ಒಂದು ವರ್ಷದಲ್ಲಿ ಮಕ್ಕಳು ತೇರು ನಿರ್ವಿುಸಿಕೊಟ್ಟಿದ್ದಾರೆ. ಈ ತೇರನ್ನು ಏ.16ರ ಜಾತ್ರಾ ಮಹೋತ್ಸವದಲ್ಲಿ ಕೊಪ್ಪಳದ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸಿದರು.


Spread the love

About Laxminews 24x7

Check Also

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

Spread the loveಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ