Breaking News

ಧಾರವಾಡ- ಬೆಳಗಾವಿ ರೈಲು ಮಾರ್ಗ ನಿರ್ಮಾಣಕ್ಕೆ ಧಾರವಾಡ ಹೈಕೋರ್ಟ್ ತಡೆ

Spread the love

ಧಾರವಾಡ: ಧಾರವಾಡ- ಬೆಳಗಾವಿ ನೂತನ ರೈಲ್ವೆ ಮಾರ್ಗದ ಯೋಜನೆಗೆ ಸಂಬಂಧಸಿದಂತೆ 2021ರ ಅಕ್ಟೋಬರ್ 16ರಂದು ಹುಬ್ಬಳ್ಳಿಯಲ್ಲಿ ಸಂಸತ್ತಿನ ಸದಸ್ಯರು ತೆಗೆದುಕೊಂಡ ನಿರ್ಧಾರಕ್ಕೆ ಗುರುವಾರ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಳಗಾವಿ ತಾಲೂಕಿನ ಕೆಕೆ ಕೊಪ್ಪ, ದೇಸೂರು ಗ್ರಾಮದ ವ್ಯಾಪ್ತಿಯಲ್ಲಿ ಧಾರವಾಡ-ಬೆಳಗಾವಿ ರೈಲು ಮಾರ್ಗ ಹಾದು ಹೋಗಲಿದೆ.

ಇದಕ್ಕೆ ಸಾಕಷ್ಟು ಕೃಷಿ ಭೂಮಿ ಬಳಕೆಯಾಗಲಿದೆ. ಹೀಗಾಗಿ ಕೆಲ ಜನಪ್ರತಿನಿಧಿಗಳು, ರೈತರ ಮುಖಂಡರು ಕೃಷಿ ಭೂಮಿ ಕೈ ಬಿಟ್ಟು ಪಕ್ಕದ ಸರಕಾರಿ ಭೂಮಿ ಬಳಕೆಗೆ ಸಲಹೆ ನೀಡಿದ್ದರು. ಇದರಿಂದ ರೈಲು ಮಾರ್ಗದ 5 ರಿಂದ 6 ಕಿ.ಮೀ. ಅಂತರ ಕಡಿಮೆಯಾಗಲಿದೆ ಎಂದು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ್ದ ರೈಲ್ವೆ ಇಲಾಖೆ ಮರು ಸಮೀಕ್ಷೆ ಮಾಡಿತ್ತು.

ಬಳಿಕ ಹುಬ್ಬಳ್ಳಿಯ ನೈಋತ್ಯ ರೈಲ್ವೆ ಇಲಾಖೆ ಕೇಂದ್ರ ಕಚೇರಿಯಲ್ಲಿ 2021ರ ಅಕ್ಟೋಬರ್ 16ರಂದು ಜರುಗಿದ ಒಂಬತ್ತು ಜನ ಸಂಸತ್ತಿನ ಸದಸ್ಯರ ಸಭೆಯಲ್ಲಿ, ರೈತರು ಸೂಚಿಸಿದ ಮಾರ್ಗವನ್ನು ಬಿಟ್ಟು, ದೇಸೂರು ಮಾರ್ಗದಲ್ಲಿ ಕೃಷಿ ಭೂಮಿಯಲ್ಲಿಯೇ ಯೋಜನೆ ಪ್ರಾರಂಭಿಸಲು ಸಂಸತ್ತಿನ ಸದಸ್ಯರು, ರೈಲ್ವೆ ಇಲಾಖೆಯ ಎಂಜಿನಿಯರ್‌ಗಳಿಗೆ ಸೂಚಿಸಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ