Breaking News

ಪಿಎಸ್‍ಐ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ಖಚಿತ :ಸಿಎಂ ಬೊಮ್ಮಾಯಿ ಸ್ಪಷ್ಟನೆ

Spread the love

ಪಿಎಸ್‍ಐ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನರುಚ್ಚರಿಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಇದನ್ನು ಈಗಾಗಲೇ ಇದನ್ನು ಸಿಐಡಿಗೆ ವಹಿಸಿದ್ದೇವೆ.

 

ತನಿಖಾ ತಂಡದವರು ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಪ್ಪಿತಸ್ಥರು ಯಾರೇ ಇರಲಿ ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಿಂದೆ ನಡೆದಿರುವ ನೇಮಕಾತಿ ಹಾಗೂ ಕಳೆದ ಫೆಬ್ರವರಿಯಲ್ಲಿ 402 ಪಿಎಸ್‍ಐ ನೇಮಕಾತಿಯ ಪರೀಕ್ಷೆಯಲ್ಲೂ ಅಕ್ರಮ ಎಸಗಲು ಇಬ್ಬರು ನಡೆಸಿರುವ ಆಡಿಯೋ ಸಂಭಾಷಣೆ ಕುರಿತು ತನಿಖೆ ನಡೆಸಲಿದ್ದೇವೆ.

ಆ ಪಕ್ಷ, ಈ ಪಕ್ಷ ಯಾವುದನ್ನೂ ನೋಡದೇ ತಪ್ಪಿತಸ್ಥರು ಯಾರೇ ಇರಲಿ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದರು. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ