Breaking News

ಆರೋಪಿಗಳ ಕುಟುಂಬಕ್ಕೆ ಸಹಾಯ ಮಾಡಿದ್ದು ತಪ್ಪು : ಜಮೀರ್ ನಡೆಗೆ ನಲಪಾಡ್ ರಿಯಾಕ್ಷನ್

Spread the love

ಧಾರವಾಡ: ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮನೆಯವರಿಗೆ ರಂಜಾನ್ ಪ್ರಯುಕ್ತ ಶಾಸಕ ಜಮೀರ್ ಅಹ್ಮದ್ ಸಹಾಯ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ನಲಪಾಡ್, ನಾನು ಅದರ ಜೊತೆಗೂ ನಿಂತುಕೊಳ್ಳಲ್ಲ ಎಂದಿದ್ದಾರೆ.

ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಅದು ಅವರ ವೈಯಕ್ತಿಕ. ಪಕ್ಷದ ಬ್ಯಾನರ್ ನಲ್ಲಿ‌ ಕೊಡುತ್ತಿಲ್ಲ. ಅವರ ವೈಯಕ್ತಿಕವಾಗಿ ಕೊಡುತ್ತಿದ್ದಾರೆ. ಪಕ್ಷದಿಂದ ಕೊಟ್ಟಾಗ ಕಮೆಂಟ್ ಮಾಡಬಹುದು. ನನಗೇನು ಇದು ಸರಿ ಎನ್ನಿಸುತ್ತಿಲ್ಲ. ಅವರಿಗೆ ನಾನು ಕೊಡುತ್ತಿಲ್ಲ. ಅವರ ಜೊತೆಗೂ ನಾನು ನಿಂತುಕೊಳ್ಳಲ್ಲ ಎಂದಿದ್ದಾರೆ‌.

ಬಂಧಿತರ ಪ್ರತಿ ಕುಟುಂಬಕ್ಕೆ 5 ಸಾವಿರ ರೂಪಾಯಿ ಆರ್ಥಿಕ ಸಹಾಯ ಮತ್ತು ಫುಡ್ ಕಿಟ್ ವಿತರಣೆ ಮಾಡಲಿದ್ದಾರೆ. ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣೆ ಹತ್ತಿರದ ಮಸ್ತಾನ್ ಷಾ ಶಾದಿಮಹಲ್ ನಲ್ಲಿ ಈ ಕಿಟ್ ಹಂಚಲಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಮೀರ್, ಮನೆಯಲ್ಲಿ ದುಡಿಯುವ ಗಂಡಸರು ಇಲ್ಲದ ಕಾರಣ ತಾಯಂದಿರಿಗೆ, ಪುಟ್ಟ ಮಕ್ಕಳಿಗೆ ಸಹಾಯಯಸ್ತ ಚಾಚಿದ್ದೇನೆ ಎಂದಿದ್ದಾರೆ.


Spread the love

About Laxminews 24x7

Check Also

ಸರಕು ಸಾಗಣೆ, ಜನರ ಪ್ರಯಾಣ: ನವೆಂಬರ್​​ ತಿಂಗಳ ಆದಾಯದಲ್ಲಿ ನೈಋತ್ಯ ರೈಲ್ವೆ ಹೊಸ ದಾಖಲೆ

Spread the love ಹುಬ್ಬಳ್ಳಿ: ನೈಋತ್ಯ ರೈಲ್ವೆಯು ನವೆಂಬರ್ 2025ರಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿ, ಪ್ರಮುಖ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ