Breaking News

ಸಿಎಂ ಮನೆಯಲ್ಲೇ ಚರ್ಚೆಗೆ ಮುಹೂರ್ತ ಫಿಕ್ಸ್

Spread the love

ಬೆಂಗಳೂರು: ಮೇ 3 ಬಿಜೆಪಿಗೆ ಬಿಗ್ ಡೇ ಆಗಲಿದೆ. ಸಂಪುಟ ಪುನಾರಚನೆಯ ಮಾತುಕತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಯಲ್ಲೇ ನಡೆಯಲಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಸವರಾಜ ಬೊಮ್ಮಾಯಿ ಅವರು ಊಟದ ವ್ಯವಸ್ಥೆ ಏರ್ಪಾಡು ಮಾಡಿದ್ದಾರೆ. ಮಧ್ಯಾಹ್ನ 2 ರಿಂದ 3ಗಂಟೆ ತನಕ ಸಿಎಂ ಸರ್ಕಾರಿ ನಿವಾಸದಲ್ಲಿ ಅಮಿತ್ ಶಾ ಲಂಚ್ ಟಾಕ್ ನಡೆಯಲಿದೆ.

ಆ ಒಂದು ಗಂಟೆಯಲ್ಲಿ ರಾಜ್ಯ ಸಂಪುಟ ಪುನಾರಚನೆಯ ಅಸಲಿ ಆಟ ನಡೆಯಲಿದೆ. ಅದಾದ ಬಳಿಕ 4 ಗಂಟೆಗೆ ಬಿಜೆಪಿ ಕಚೇರಿಗೂ ತೆರಳಿ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಒಂದು ಗಂಟೆಗಳ ಕಾಲ ಬಿಜೆಪಿ ಕಚೇರಿಯಲ್ಲಿ ಅಮಿತ್ ಶಾ ಇರಲಿದ್ದು, ಈ ವೇಳೆ ಸಂಘಟನೆ, ಸರ್ಕಾರದ ರಿವ್ಯೂವ್ ಮಾಡಲಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ