ಬೆಳಗಾವಿ: ಗೃಹ ಸಚಿವರು ಅರ್ಧ ಜ್ಞಾನೇಂದ್ರ. ಫುಲ್ ಜ್ಞಾನ ಇದ್ದಿದ್ರೆ ಕಷ್ಟ ಇರಲಿಲ್ಲ. ಆದರೆ ಅರ್ಧ ಜ್ಞಾನ ಇಟ್ಟುಕೊಂಡು ಇಂತಹ ಕೆಲಸಗಳನ್ನ ಮಾಡಿಕೊಂಡು ಹೋಗುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ಯೂಥ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಇರುವವರೇ ಹಗರಣ ಮಾಡಿದ್ದಾರೆ. 56 ಸಾವಿರ ಯುವಕರ ಜೀವನದ ಜೊತೆಗೆ ಆಟವಾಡಿದ್ದಾರೆ. ಈ ಬಿಜೆಪಿ ಸರ್ಕಾರಕ್ಕೆ ಮಾನ, ಮರ್ಯಾದೆ, ಬೇಜಾರು ಜನಪರವಾದ ಕಾಳಜಿ ಇದ್ದರೆ ಇದನ್ನ ಹೇಗೆ ಬಗೆ ಹರಿಸುತ್ತಾರೆ ನೋಡಬೇಕು. ಇದರಲ್ಲಿ ಕಷ್ಟಪಟ್ಟು ಬರೆದವರು ಇರುತ್ತಾರೆ. ಪರೀಕ್ಷೆ ಬರೆದ ಎಲ್ಲರಿಗೂ ನೀವು ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.