Breaking News

ಜನ ವಿರೋಧಿ ಬಿಜೆಪಿ ಸರ್ಕಾರಕ್ಕೆ 40% ಕಮಿಷನ್ ಬಿಟ್ಟು ಬೇರೆ ಎನೂ ಕಾಣಿಸುತ್ತಿಲ್ಲ.: ಮೊಹಮ್ಮದ್ ನಲಪಾಡ್

Spread the love

ಬೆಳಗಾವಿ: ದೇಶದಲ್ಲಿ ಬಿಜೆಪಿಯರು ಹಿಂದುತ್ವವನ್ನು ಲೀಸ್‍ಗೆ ಪಡೆದಿದ್ದಾರಾ ಎಂದು ಸಂಸದ ಪ್ರತಾಪ್ ಸಿಂಹಗೆ ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರ್ಖ ಜನ ವಿರೋಧಿ ಬಿಜೆಪಿ ಸರ್ಕಾರಕ್ಕೆ 40% ಕಮಿಷನ್ ಬಿಟ್ಟು ಬೇರೆ ಎನೂ ಕಾಣಿಸುತ್ತಿಲ್ಲ. ಕಳೆದ ಏಳು ವರ್ಷದಿಂದ ಪೆಟ್ರೋಲ್, ಡೀಸೆಲ್ ದರ ಡಬಲ್ ಆಗಿದೆ. ಸಾಮಾನ್ಯ ಒಬ್ಬ ವ್ಯಕ್ತಿ ಮನೆಯಿಂದ ಆಚೆ ಬರಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಪ್ರತಾ‌ಪ್ ಸಿಂಹ ಅವರು ಹೇಳ್ತಾರೆ ಕಾಂಗ್ರೆಸ್‍ನಲ್ಲಿ ಬಣ ಇದೆ ಅಂತಾ. ಆದರೆ ಕಾಂಗ್ರೆಸ್ ನಲ್ಲಿ ಇರೋದು ಒಂದೇ ಬಣ. ಅದು ಕಾಂಗ್ರೆಸ್ ಬಣ ಎಂದರು. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಅವರು ಯಾವ ಧರ್ಮಕ್ಕೆ ಸೇರಿದವರು. ನಾವೇನೂ ಇಂತಹದ್ದೇ ಜಾತಿಯಲ್ಲಿ ಹುಟ್ಟಬೇಕು ಅಂತಾ ಅರ್ಜಿ ಹಾಕಿ ಹುಟ್ಟಿದ್ದೇವಾ..? ಬಿಜೆಪಿಯರು ಹಿಂದುತ್ವವನ್ನು ಲೀಸ್‍ಗೆ ಪಡೆದಿದ್ದಾರಾ ಎಂದು ಸಂಸದ ಪ್ರತಾಪ್ ಸಿಂಹಗೆ‌ ನಲಪಾಡ್ ತಿರುಗೇಟು ನೀಡಿದ್ದಾರೆ.

 


Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ