Breaking News

ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಆಯುಷ್ಮಾನ್: ಆಯುಷ್ಮಾನ್ ಭಾರತ ದಿನ ಇಂದು

Spread the love

ಬೆಂಗಳೂರು: ಎರಡು ವರ್ಷಗಳಿಂದ ಜನರನ್ನು ಕಾಡುತ್ತಿರುವ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಸಾರ್ವತ್ರಿಕ ಆರೋಗ್ಯ ರಕ್ಷಣೆ ಗುರಿಯೊಂದಿಗೆ ದೇಶವು ಇಂದು (ಏ.30) ಆಯುಷ್ಮಾನ್ ಭಾರತ ದಿನವನ್ನು ಆಚರಿಸುತ್ತಿದೆ.

ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ ಆರೋಗ್ಯ ರಕ್ಷಣೆಯ ಅರಿವು ಮೂಡಿಸಲು ಈ ದಿನವನ್ನು ಗೊತ್ತುಪಡಿಸಲಾಗಿದೆ.

ಆರೋಗ್ಯ ಮತ್ತು ಯೋಗಕ್ಷೇಮ ಉತ್ತೇಜಿಸಲು ಬಡವರು ಮತ್ತು ಸೌಲಭ್ಯವಂಚಿತರಿಗೆ ಆರೋಗ್ಯ ವಿಮಾ ರಕ್ಷಣೆ ಖಚಿತಪಡಿಸಿಕೊಳ್ಳಲು, ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯ ಕುರಿತು ಅರಿವು ಮೂಡಿಲು ಈ ದಿನವನ್ನು ಮೀಸಲಿಡಲಾಗಿದೆ. ಇದನ್ನು ರಾಷ್ಟ್ರೀಯ ಆರೋಗ್ಯ ವಿಮಾ ಕಾರ್ಯಕ್ರಮ ಅಥವಾ ‘ಮೋದಿ ಕೇರ್’ ಎಂದೂ ಕರೆಯಲಾಗುತ್ತದೆ. ಜನರ ಅಗತ್ಯಗಳನ್ನು ಆಧರಿಸಿ ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಗುರಿಯೊಂದಿಗೆ ಸರ್ಕಾರ ‘ಆಯುಷ್ಮಾನ್ ಭಾರತ ದಿನ’ ಆಚರಿಸುತ್ತಿದೆ. ಇದಕ್ಕಾಗಿ ಪೂರಕ ಯೋಜನೆ ರೂಪಿಸಿದೆ. ಆ ಮೂಲಕ ದೇಶದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ.

ಅಗತ್ಯತೆ ಏನು?: ರಾಷ್ಟ್ರೀಯ ಮಾದರಿ ಸಮೀಕ್ಷಾ ಕಚೇರಿಯ ಇತ್ತೀಚಿನ ಸಂಶೋಧನೆಗಳ ಪ್ರಕಾರ ಭಾರತದಲ್ಲಿ ಆರೋಗ್ಯ ವ್ಯವಸ್ಥೆಯು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಶೇ.86 ಗ್ರಾಮೀಣ ಪ್ರದೇಶದ ಜನರು ಹಾಗೂ ಶೇ.82 ನಗರಪ್ರದೇಶದ ಜನರು ಆರೋಗ್ಯ ವಿಮೆ ಹೊಂದಿಲ್ಲ. ಇದರ ಪರಿಣಾಮ ಅನಿರೀಕ್ಷಿತ ಘಟನೆ, ದೀರ್ಘಕಾಲೀನ ಆರೋಗ್ಯ ಸಮಸ್ಯೆಯಿಂದ ಈ ಕುಟುಂಬಗಳು ಸಾಲದ ಸುಳಿಗೆ ಸಿಲುಕಿಕೊಳ್ಳುತ್ತವೆ. ಇದಕ್ಕೆ ಪರಿಹಾರವಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ.


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ