Breaking News

PSI ನೇಮಕಾತಿ ರದ್ದು ಮಾಡಿದ ‘ರಾಜ್ಯ ಸರ್ಕಾರ’: ಹೆಚ್ಚಿದ ಆಕ್ರೋಶ, ವ್ಯಾಪಕ ಟೀಕೆ ಇಂದಿನಿಂದ ಉಪವಾಸ ಸತ್ಯಾಗ್ರಹ

Spread the love

ಬೆಂಗಳೂರು: ರಾಜ್ಯ ಸರ್ಕಾರದ ನಿದ್ದೆಕೆಡಿಸಿರುವ PSI ನೇಮಕ ಹಗರಣ ದಿನದಿಂದ ದಿನಕ್ಕೆ ಒಂದ ತಿರುವು ಪಡೆದುಕೊಳ್ಳುತ್ತಿದ್ದು, ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಮತ್ತೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

 

ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ ಅಭ್ಯರ್ಥಿಗಳ ಸೇರಿದಂತೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದು, ಸರ್ಕಾರದ ಕ್ರಮವನ್ನು ಖಂಡಿಸುತ್ತಿದ್ದಾರೆ. ಸರ್ಕಾರ ಯಾರದ್ದೂ ತಪ್ಪನ್ನು ನಮಗೆ ಶಿಕ್ಷೆ ನೀಡಲು ಮುಂದಾಗಿರುವುದು ನಮಗೆ ಬೇಸರ ತಂದಿದ್ದೆ, ಈ ನಿಟ್ಟಿನಲ್ಲಿ ಕಾನೂನು ಸಮರಕ್ಕೆ ಮುಂದಾಗಲಿದ್ದು, ಇದಲ್ಲದೇ ಸರ್ಕಾರದ ಕ್ರಮ ಖಂಡಿಸಿ ಶನಿವಾರದಿಂದ ಉಪವಾಸ ಸತ್ಯಾಗ್ರಹ ನಡೆಸಲು ಪ್ರಾಮಾಣಿಕ ವಿದ್ಯಾರ್ಥೀಗಳು ಮುಂದಾಗಿದ್ದಾರೆ.

ಸರ್ಕಾರದ ಕ್ರಮಕ್ಕೆ ಮಾಜಿ‌ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಖಂಡಿಸಿದ್ದು, ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸರ್ಕಾರದ ನಿರ್ಧಾರವನ್ನು ಅವರು ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರದ ನಿರ್ಧಾರಕ್ಕೆ ಸಂಬಂಧಪಟ್ಟಂತೆ ಸಿಎಂ ಜೊತೆಗೆ ಚರ್ಚೆ ನಡೆಸುವೆ ಅಂತ ಹೇಳಿದ್ದಾರೆ. ಯಾರು ಅಕ್ರಮದಲ್ಲಿ ಭಾಗವಹಿಸಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳಿ, ಎಕ್ಸಾಂ ನಡೆಸಲು ಮುಂದಾರೆ, ಈಗ ವಿದ್ಯಾರ್ಥಿಗಳು ಯಾವೆಲ್ಲ ಸನ್ನಿವೇಶದಲ್ಲಿ ಇದ್ದರೋ ಗೊತ್ತಿಲ್ಲ, ಈ ನಿಟ್ಟಿನಲ್ಲಿ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ನಾಯ್ಯ ಒದಗಿಸುವಂತೆ ಅವರು ಹೇಳಿದ್ದಾರೆ.

 


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ