Breaking News

ಪಿಎಸ್‍ಐ ಮರುಪರೀಕ್ಷೆ ದಿನಾಂಕ ಪ್ರಕಟ ಶೀಘ್ರದಲ್ಲೇ : ಆರಗ ಜ್ಞಾನೇಂದ್ರ

Spread the love

ಶಿವಮೊಗ್ಗ: ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ, ಸರ್ಕಾರ ಮರು ಪರೀಕ್ಷೆ ಮಾಡಲು ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಪಿಎಸ್‍ಐ ಮರು ಪರೀಕ್ಷೆಯ ದಿನಾಂಕ ಪ್ರಕಟ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಿಎಸ್‍ಐ ಪರೀಕ್ಷೆಯ ಅಕ್ರಮದ ಕುರಿತು ಒಂದೊಂದೆ ಅಂಶ ಹೊರಗೆ ಬರುತ್ತಿದೆ. ಈಗಾಗಲೇ ಪ್ರಕರಣ ಸಂಬಂಧ ಅನೇಕರನ್ನು ಬಂಧಿಸಲಾಗಿದೆ. ಪರೀಕ್ಷೆಯಲ್ಲಿ ನೂತನ ಟೆಕ್ನಾಲಜಿ ಬಳಸಿ ಅಕ್ರಮ ಎಸಗಿದ್ದಾರೆ. ಹೀಗಾಗಿ ಮರು ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ ಎಂದರು.ನಾವು ಪರೀಕ್ಷೆಯ ನೋಟಿಫಿಕೇಷನ್ ರದ್ದು ಮಾಡಿಲ್ಲ, ಪರೀಕ್ಷೆ ರದ್ದು ಮಾಡಿದ್ದೇವೆ. ಈಗಾಗಲೇ ಪರೀಕ್ಷೆ ಬರೆದಿದ್ದವರಿಗೆ ಮಾತ್ರ ಪರೀಕ್ಷೆಗೆ ಅವಕಾಶ ನೀಡಲಾಗುವುದು. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ನಮ್ಮ ಕಣ್ಣು ತೆರೆದಂತೆ ಆಗಿದೆ. ಪ್ರತಿಭಾವಂತರಿಗೆ ಅವಕಾಶ ಸಿಗಬೇಕು ಎಂಬ ಕಾರಣದಿಂದ ಸರಿಯಾದ ರೀತಿಯಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದರು. ಪರೀಕ್ಷೆಯಲ್ಲಿ ಈ ರೀತಿ ವಂಚನೆ ಆಗುವುದನ್ನು ತಡೆಗಟ್ಟಲು ಕಾನೂನಿಗೆ ತಿದ್ದುಪಡಿ ತರಬೇಕು ಎನ್ನುವ ಚಿಂತನೆ ಇದೆ. ತಪ್ಪಿತಸ್ಥರು ಜೈಲಿನಿಂದ ಹೊರಗೆ ಬರಬಾರದು. ಕಷ್ಟಪಟ್ಟು ಓದಿದವರಿಗೆ ಅನ್ಯಾಯವಾಗಬಾರದು. ಹಣಕೊಟ್ಟು ಕೊಂಡುಕೊಳ್ಳುತ್ತೇನೆ ಎನ್ನುವವರು ತೊಲಗಬೇಕು. ಮರು ಪರೀಕ್ಷೆಯಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆ ಇರುವುದಿಲ್ಲ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ