Breaking News

ಇಂದಿನಿಂದ ಜೂ.15ರ ವರೆಗೆ ಸರಕಾರಿ ನೌಕರರ ವರ್ಗಾವಣೆ

Spread the love

ಬೆಂಗಳೂರು: 2022-23ನೇ ಸಾಲಿನಲ್ಲಿ ಮಾಡಲಾಗುವ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಹೊರಡಿಸಿರುವ ಸರಕಾರ, ಆಯಾ ಇಲಾಖಾ ಸಚಿವರಿಗೆ ವರ್ಗಾವಣೆ ಅಧಿಕಾರ ನೀಡಿದೆ.

ಮಾರ್ಗಸೂಚಿ ಪ್ರಕಾರ, ಪ್ರತಿ ವರ್ಷ ಮೇ ಮತ್ತು ಜೂನ್‌ ತಿಂಗಳಲ್ಲಿ ಮಾತ್ರ ವರ್ಗಾವಣೆಗಳನ್ನು ಮಾಡಬಹುದು.

 

ಈ ಹಿನ್ನೆಲೆಯಲ್ಲಿ 2022-23ನೇ ಸಾಲಿಗೆ ಎ, ಬಿ, ಸಿ ಮತ್ತು ಡಿ ಗ್ರೂಪ್‌ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 2022ರ ಮೇ 1ರಿಂದ ಜೂ.15ರ ವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿದೆ.

ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಶನಿವಾರ ಈ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಮಕ್ಕಳ ಜೊತೆಗೆ ಮಕ್ಕಳಾದ ಡಿಸಿ ಮಕ್ಕಳಿಗೆ ಚನ್ನಾಗಿ ಅಭ್ಯಾಸ ಮಾಡಿ, ನನ್ನಂತೆ ಜಿಲ್ಲಾಧಿಕಾರಿ ಆಗುವಂತೆ ಸ್ಫೂರ್ತಿ

Spread the loveಕಳೆದ 11 ವರ್ಷಗಳಿಂದ ಒಕ್ಕುಂದ ಉತ್ಸವ ಆಚರಿಸುತ್ತಿರುವ ಗ್ರಾಮಸ್ಥರನ್ನು ಶ್ಲಾಘಿಸಿದ ಡಿಸಿ ಮೊಹಮ್ಮದ್ ರೋಷನ್ ಅವರು ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ