Breaking News

ಇಂದು ಚಂದ್ರ ದರ್ಶನವಾಗದ ಕಾರಣ ನಾಳೆ ಬದಲು ನಾಡಿದ್ದು ಮಂಗಳವಾರ ರಂಜಾನ್

Spread the love

ಬೆಂಗಳೂರು: ಇಂದು ಚಂದ್ರದರ್ಶನ ವಾಗದ ಹಿನ್ನೆಲೆಯಲ್ಲಿ ಸೋಮವಾರದ ಬದಲು ಮಂಗಳವಾರ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತದೆ.

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂದ್ರದರ್ಶನವಾಗದ ಕಾರಣ ಮಂಗಳವಾರ ರಂಜಾನ್ ಆಚರಿಸಲಾಗುವುದು ಎನ್ನಲಾಗಿದೆ.

 

ಮೇ 3 ರಂದು ರಂಜಾನ್ ನಿಗದಿಯಾಗಿತ್ತು. ರಾಜ್ಯದಲ್ಲಿ ಮೇ 2 ರಂದು ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಆದರೆ, ಚಂದ್ರದರ್ಶನವಾಗದ ಕಾರಣ ಸೋಮವಾರದ ಬದಲು ಮಂಗಳವಾರ ರಂಜಾನ್ ಆಚರಿಸಲಾಗುವುದು ಎನ್ನಲಾಗಿದೆ.

ಕೇರಳ ಮತ್ತು ಕರಾವಳಿ ಭಾಗದಲ್ಲಿಯೂ ಇಂದು ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಭಾರತದಾದ್ಯಂತ ಮಂಗಳವಾರವೇ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಲಾಗುವುದು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ