Breaking News

ದೇವಸ್ಥಾನ ಕಂಪೌಂಡ್ ಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ಹಾಗೂ ಶಿಕ್ಷಕನೋರ್ವನ ಮಧ್ಯೆ ಗಲಾಟೆ

Spread the love

ಚಿಕ್ಕೋಡಿ: ದೇವಸ್ಥಾನ ಕಂಪೌಂಡ್ ಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ಹಾಗೂ ಶಿಕ್ಷಕನೋರ್ವನ ಮಧ್ಯೆ ಗಲಾಟೆ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ನಡೆದಿದೆ.

ಮುಗಳಖೋಡ ಪಟ್ಟಣದ ದುರ್ಗಾದೇವಿ ಸೇವಾಲಾಲ್ ದೇವಸ್ಥಾಕ್ಕೆ ಕಂಪೌಂಡ್ ನಿರ್ಮಾಣ ಮಾಡುವ ವಿಚಾರವಾಗಿ ಜಗಳ ನಡೆದಿದೆ. ಹಾರೂಗೇರಿ ಪಿಎಸ್‍ಐ ರಾಘವೇಂದ್ರ ಖೋತ್ ಹಾಗೂ ಶಿಕ್ಷಕ ಚಂದ್ರು ಲಮಾಣಿ ಮಧ್ಯೆ ವಾಗ್ವಾದ ನಡೆದಿದೆ. ದುರ್ಗಾದೇವಿ ಸೇವಾಲಾಲ್ ದೇವಸ್ಥಾಕ್ಕೆ ಕಂಪೌಂಡ್ ನಿರ್ಮಾಣ ಮಾಡಲು ಪುರಸಭೆ ಅಧಿಕಾರಿಗಳು ತಯಾರಿ ನಡೆಸಿದ್ದರು.

 

ಶಿಕ್ಷಕ ಚಂದ್ರು ಲಮಾಣಿ ಇದನ್ನು ವಿರೋಧಿಸಿದ ಕಾರಣ ಪುರಸಭೆ ಅಧಿಕಾರಿಗಳು ಪೊಲೀಸರ ಮೊರೆ ಹೋಗಿದ್ದರು. ಪುರಸಭೆ ಅಧಿಕಾರಿಗಳ ದೂರಿನನ್ವಯ ಸ್ಥಳ ಪರಿಶೀಲನೆ ಮಾಡಲು ಹೋಗಿದ್ದ ಸಂದರ್ಭದಲ್ಲಿ ಈ ಗಲಾಟೆ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ