Breaking News

ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಇಬ್ಬರು ಮಹಿಳಾ ಅಧಿಕಾರಿಗಳು

Spread the love

ಬೆಂಗಳೂರು, ಮೇ 6: ವಾಣಿಜ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಆಯುಕ್ತೆ ಪ್ರಿಯಾಂಕ ಜೆ.ಸಿ. ಹಾಗೂ ಮಂಡ್ಯ ಜಿಲ್ಲೆಯ ಪರಿಸರ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಲತಾ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

 

ಪ್ರಿಯಾಂಕ ಅವರು ಮಂಜುನಾಥ್ ಎಂಬ ಎಲೆಕ್ಟ್ರಿಕಲ್ ಹಾಗೂ ಹಾರ್ಡ್‍ವೇರ್ ಉದ್ಯಮಿಗೆ ಜಿಎಸ್‍ಟಿ ಸರ್ಟಿಫಿಕೇಟ್ ನೀಡಲು 10 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟು, 3 ಸಾವಿರ ರೂ.ಗಳನ್ನು ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಪೆಟ್ರೋಲ್ ಬಂಕ್ ತೆರೆಯಲು ಎನ್.ಓ.ಸಿ. ನೀಡುವುದಕ್ಕಾಗಿ ಹೇಮಲತಾ ಅವರು 30 ಸಾವಿರ ರೂ.ಗಳ ಬೇಡಿಕೆಯನ್ನು ಇಟ್ಟಿದ್ದು, 15 ಸಾವಿರ ಮುಂಗಡ ಹಣವನ್ನು ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ ಎಂದು ಪ್ರಕಟನೆಯಲ್ಲಿ ಎಸಿಬಿ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ…

Spread the love ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ… ಗುಂಪುಗಾರಿಕೆ ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ; ಡಿಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ