Breaking News

ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು!

Spread the love

ತೀರ್ಥಹಳ್ಳಿ: ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಕಾರು ಎರಡು ದಿನ ಗುಡ್ಡೇಕೊಪ್ಪ (ಗೃಹ ಸಚಿವರ ನಿವಾಸವಿರುವ ಗ್ರಾಮ) ದಲ್ಲಿ ಇತ್ತು. ಅವರ ಜತೆ ಗೃಹಸಚಿವರು ನೇರ ಸಂಪರ್ಕ ಹೊಂದಿದ್ದರು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಗಂಭೀರ ಆರೋಪ ಮಾಡಿದ್ದಾರೆ.

 

ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪದಿಂದ ಶಿವಮೊಗ್ಗದವರೆಗೆ ಹಮ್ಮಿಕೊಂಡಿರುವ ನಾಲ್ಕು ದಿನಗಳ ಪಾದಯಾತ್ರೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಕಿಮ್ಮನೆ ರತ್ನಾಕರ್​, ಪಿಎಸ್​ಐ ಹುದ್ದೆ ಹಗರಣದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಒಂದಿಬ್ಬರು ಭಾಗಿಯಾಗಿರುವ ಶಂಕೆ ಇದೆ. ಗೃಹ ಸಚಿವರ ಮೇಲೇ ಆರೋಪವಿರುವ ಕಾರಣ ಅವರ ವಿರುದ್ಧ ಯಾರೂ ಸಾಕ್ಷಿ ಹೇಳೋಕೆ ಮುಂದೆ ಬರಲ್ಲ. ನಿಷ್ಪಕ್ಷ ತನಿಖೆ ನಡೆಯಬೇಕೆಂದರೆ ಗೃಹ ಸಚಿವರು ಈ ಕೂಡಲೇ ರಾಜೀನಾಮೆ ನೀಡಿ ಸಂಪುಟದಿಂದ ಹೊರಬರಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ