ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election ) ವರ್ಷ ಬಾಕಿಯಿರುವಾಗಲೇ, ಬಿಜೆಪಿ ಪಕ್ಷಕ್ಕೆ ( BJP Party ) ಸಂಘಟನೆ ಚುರುಕುಗೊಳಿಸಿದೆ. ಈ ಬೆನ್ನಲ್ಲೇ ಬೇರೆ ಪಕ್ಷಗಳಿಂದ ರಾಜಕೀಯ ನಾಯಕರನ್ನು ಸೆಳೆಯುವ ಕಾರ್ಯವನ್ನು ಮುಂದುವರೆಸಿದೆ.
ಮಂಡ್ಯ ಹಾಗೂ ಕೋಲಾರ ಜಿಲ್ಲೆಯಲ್ಲಿ ಪಕ್ಷ ಬಲ ಪಡಿಸೋ ನಿಟ್ಟಿನಲ್ಲಿ ಮಹತ್ವದ ತಂತ್ರ ಹೆಣೆದಿದೆ. ಈ ನಿಟ್ಟಿನಲ್ಲಿಯೇ ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಮಾಜಿ ಶಾಸಕ ಮಂಜುನಾಥ್ ಗೌಡ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ನಗರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ), ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ( Nalin Kumar Kateel ) ನೇತೃತ್ವದಲ್ಲಿ ಇಂದು ಮಹತ್ವದ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಸಚಿವರಾದಂತ ಡಾ.ಕೆ.ಸುಧಾಕರ್, ಮುನಿರತ್ನ, ಗೋಪಾಲಯ್ಯ ಸಮ್ಮುಖದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಮಾಜಿ ಶಾಸಕ ಮಂಜುನಾಥ್ ಬಿಜೆಪಿ ಸೇರ್ಪಡೆಗೊಂಡರು.
Laxmi News 24×7