Breaking News

ಕನ್ನಡ ಫಲಕಕ್ಕಾಗಿ ಮಾತುಕತೆ ನಡೆಸಿ: ಅಶೋಕ ಚಂದರಗಿ

Spread the love

ಬೆಳಗಾವಿ: ‘ಕರ್ನಾಟಕದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಎಂಎಸ್‌ಆರ್‌ಟಿಸಿ) ಬಸ್‌ಗಳ ನಾಮಫಲಕದಲ್ಲಿ ಕನ್ನಡ ಬಳಸುವ ಸಂಬಂಧ ಮಹಾರಾಷ್ಟ್ರ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಬೇಕು’ ಎಂದು ಒತ್ತಾಯಿಸಿ ಕನ್ನಡ ಹೋರಾಟಗಾರರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್‌ಡಬ್ಲ್ಯುಕೆಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕ, ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

 

‘ಹೊರ ರಾಜ್ಯಗಳಿಗೆ ತೆರಳುವ (ಕೆಎಸ್‌ಆರ್‌ಟಿಸಿ) ಬಸ್‌ಗಳ ನಾಮಫಲಕದಲ್ಲಿ ಕನ್ನಡ, ಇಂಗ್ಲಿಷ್‌ ಮತ್ತು ಆಯಾ ರಾಜ್ಯದ ಪ್ರಾದೇಶಿಕ ಭಾಷೆಯನ್ನೂ ಬಳಸಲಾಗುತ್ತಿದೆ. ಆದರೆ, ಕರ್ನಾಟಕಕ್ಕೆ ಬರುವ ಎಂಎಸ್‌ಆರ್‌ಟಿಸಿ ಬಸ್‌ಗಳ ನಾಮಫಲಕದಲ್ಲಿ ಕನ್ನಡ ಬಳಸದ್ದರಿಂದ ಗಡಿ ಭಾಗದ ಕನ್ನಡಿಗರಿಗೆ ತೊಂದರೆ ಆಗುತ್ತಿದೆ. ಹಾಗಾಗಿ ಮಹಾರಾಷ್ಟ್ರ ಅಧಿಕಾರಿಗಳೊಂದಿಗೆ ಮಾತನಾಡಿ ಕನ್ನಡ ಬಳಸುವಂತೆ ತಿಳಿಸಬೇಕು’ ಎಂದಿದ್ದಾರೆ.


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ