Breaking News

ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವಬಿಜೆಪಿ ಸರ್ಕಾರ: ಸಿದ್ದರಾಮಯ್ಯ

Spread the love

ಬೆಂಗಳೂರು: ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

 

ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ. ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ