Breaking News
Home / ರಾಜಕೀಯ / ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಗೆ ಮಸೀದಿಗಳಲ್ಲಿ ‘ಆಜಾನ್’ ಕೂಗದಿರಲು ‘ಮುಸ್ಲೀಂ ಮುಖಂಡರ ಸಭೆ’ಯಲ್ಲಿ ನಿರ್ಧಾರ

ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಗೆ ಮಸೀದಿಗಳಲ್ಲಿ ‘ಆಜಾನ್’ ಕೂಗದಿರಲು ‘ಮುಸ್ಲೀಂ ಮುಖಂಡರ ಸಭೆ’ಯಲ್ಲಿ ನಿರ್ಧಾರ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲೀಂ ಮುಖಂಡರು, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.

 

ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಇಮಾಮ್ ಮೌಲಾನ್ ಮಕ್ಸೂದ್ ಇಮ್ರಾನ್ ರಶಾದಿ ಅವರು, ಇನ್ಮುಂದೆ ಬೆಳಿಗ್ಗೆ 5 ಗಂಟೆಗೆ ಧ್ವನಿ ವರ್ಧಕಗಳಲ್ಲಿ ಆಜಾನ್ ಕೂಗದಂತೆ ಎಲ್ಲಾ ಮಸೀದಿ, ಮುಸ್ಲೀಂ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ