Breaking News

ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ 14 ಕುರಿಗಳು ಸಾವು

Spread the love

ವಿಜಯಪುರ :  ಜಿಲ್ಲೆಯ  ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇದೇ ವೇಳೆ ಸಿಡಿಲು ಬಡಿದು 14 ಕುರಿಗಳು ಮೃತಪಟ್ಟಿವೆ.

ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ಹೊರ ಭಾಗದಲ್ಲಿ ಕುರಿಗಳನ್ನು ಮೇಯಿಸುವಾಗ ಈ ದುರ್ಘಟನೆ ನಡೆದಿದೆ.

 

ಇವು ವಿಜಯಪುರ ತಾಲೂಕಿನ ಅಲಿಯಾ ಬಾದ ಗ್ರಾಮದ ದೊಂಡಿಬಾ ಸಂಡಗೆ ಎಂಬವರಿಗೆ ಸೇರಿದ ಕುರಿಗಳು. ಕುರಿ ಮೇಯಿಸಲು ಮಸೂತಿ ಗ್ರಾಮದ ಬಳಿ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. 

ಕುರಿಗಾಹಿ ದೊಂಡಿಬಾಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ