Breaking News

ತುಂಗಭದ್ರಾ ಜಲಾಶಯಕ್ಕೆ ವಾಡಿಕೆಗೂ ಮೊದಲೇ ಭಾರೀ ಒಳ ಹರಿವು ಹೆಚ್ಚಾಳವಾಗಿದ್ದು, ಡ್ಯಾಂ ಹಿನ್ನೀರಿನ ಬೆಳೆ ಜಲಾವೃತ

Spread the love

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ವಾಡಿಕೆಗೂ ಮೊದಲೇ ಭಾರೀ ಒಳ ಹರಿವು ಹೆಚ್ಚಾಳವಾಗಿದ್ದು, ಡ್ಯಾಂ ಹಿನ್ನೀರಿನ ಬೆಳೆ ಜಲಾವೃತವಾಗಿವೆ.

ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿನ ಹಿನ್ನೀರಿನಲ್ಲಿ ಮೆಕ್ಕೆಜೋಳ ಬೆಳೆ ನೀರು ಪಾಲಾಗಿದೆ. ಇದರಿಂದ ರೈತ ಮಂಜುನಾಥ್ ಕಂಗಲಾಗಿದ್ದಾರೆ. ಸಾಮಾನ್ಯವಾಗಿ ಜುಲೈ ಕೊನೆಯ ವಾರ ಟಿಬಿ ಡ್ಯಾಂನಲ್ಲಿ ಹೆಚ್ಚಿನ ಒಳ ಹರಿವು ಹೆಚ್ಚಾಗುತ್ತದೆ. ಆದರೆ ಈ ಬಾರಿ ತುಂಗಭದ್ರಾ ಜಲಾಶಯಕ್ಕೆ ನಿರೀಕ್ಷೆಗೂ ಮೊದಲೇ 85 ಸಾವಿರ ಕ್ಯೂಸೆಕ್ ಒಳ ಹರಿವು ಹೆಚ್ಚಾಗಿದ್ದು, ಸದ್ಯ ಜಲಾಶಯದಲ್ಲಿ 27 ಟಿಎಂಸಿ ನೀರು ಸಂಗ್ರಹವಾಗಿದೆ.

ಈ ಹಿನ್ನೆಲೆಯಲ್ಲಿ ಜಲಾಶಯಕ್ಕಾಗಿ ಭೂ ಸ್ವಾಧೀನ ಮಾಡಿಕೊಂಡ ಭೂಮಿಯಲ್ಲಿ ಬೆಳೆದ ಬೆಳೆ ನೀರಿನಲ್ಲಿ ನಿಂತಿದೆ. ಈ ಕಾರಣದಿಂದಾಗಿ ರೈತ ಮಂಜುನಾಥ ಗಂಗಮ್ಮ ಗೋಳಾಡುತ್ತಾ ಕಣ್ಣಿರು ಹಾಕಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ