Breaking News

ಸಾಮ್ರಾಟರ ಬೆತ್ತಲೆ ಸತ್ಯ ಬಿಚ್ಚಿಟ್ಟ ಮುನಿರಾಜು: ಎಚ್.ಡಿ. ಕುಮಾರಸ್ವಾಮಿ

Spread the love

ಬೆಂಗಳೂರು: ‘ಅಶೋಕ ಅವರು ಸಾಮ್ರಾಟರಾಗಿ ಬೆಳೆಯಲು ಕಾರಣವಾದ ‘ಬೆತ್ತಲೆ ಸತ್ಯ’ದ ಹುತ್ತ ಬಿಚ್ಚಿಕೊಂಡಿದ್ದು, ಇದಕ್ಕೇನು ಹೇಳುತ್ತೀರಿ ಸಾಮ್ರಾಟರೇ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

 

ಸರಣಿ ಟ್ವೀಟ್ ಮಾಡಿರುವ ಅವರು, ‘1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಹಾಲಿ ಕಂದಾಯ ಸಚಿವ ಆರ್.ಅಶೋಕ ಅವರು ಸ್ಪರ್ಧಿಸಿದಾಗ ಯಲಹಂಕದಿಂದ ಬಂದಿದ್ದ 1,000 ಕಾರ್ಯಕರ್ತರು ತಲಾ 5ರಿಂದ 10 ಕಳ್ಳವೋಟು ಹಾಕಿ ಅವರನ್ನು ಗೆಲ್ಲಿಸಿದ್ದರು.

ಅಂಥ ಕೃತ್ಯಗಳಿಂದಲೇ ಇಂದು ಬಿಜೆಪಿ ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬಂದಿದೆ ಎಂದು ಮುನಿರಾಜು ತಮ್ಮ ಪಂಚೇಂದ್ರಿಯಗಳ ಸಾಕ್ಷಿಯಾಗಿ ತುಂಬಿದ ಕಾರ್ಯಕರ್ತರ ಸಭೆಯಲ್ಲೇ ಹೇಳಿದ್ದಾರೆ’ ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ