Breaking News

ಬಿಎಸ್ ವೈ ಪಕ್ಷದ ದೊಡ್ಡ ಶಕ್ತಿ, : ಬಿ.ಶ್ರೀರಾಮುಲು

Spread the love

ಬಳ್ಳಾರಿ: ಬಿಜೆಪಿ ಪಕ್ಷದ ದೊಡ್ಡ ಶಕ್ತಿಯಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಿಂದ ಸೈಡ್ ಲೈನ್ ಮಾಡುವ ಮಾತೇ ಇಲ್ಲ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್‌ಯಡಿಯೂರಪ್ಪನವರು ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.

ಅವರು ಪಕ್ಷದ ದೊಡ್ಡ ಶಕ್ತಿ. ಅವರ ಶಕ್ತಿ ಕುಗ್ಗಿಸುವ ಕೆಲಸ ಪಕ್ಷದಲ್ಲಿ ಎಂದೂ ನಡೆಯುವುದಿಲ್ಲ. ಎಂಥ ಪರಿಸ್ಥಿತಿಯಲ್ಲೂ ಬಿಎಸ್ ವೈ ಅವರನ್ನು ಕೈ ಬಿಡಲ್ಲ. ಅವರನ್ನು ಸೈಡ್ ಲೈನ್ ಮಾಡುವ ಮಾತೇ ಇಲ್ಲ.

ಮುಂದೆಯೂ ಸಹ ಅವರು ಪಕ್ಷದಲ್ಲಿ ಇರುತ್ತಾರೆ. ಅವರ ಶಕ್ತಿ ಕುಗ್ಗಿಸುವ ಕೆಲಸ ಬಿಜೆಪಿ ಯಾವತ್ತೂ ಮಾಡಲ್ಲ ಎಂದು ರಾಮುಲು ಸ್ಪಷ್ಟಪಡಿಸಿದರು.

ವಿಧಾನಸಭೆ ಚುನಾವಣೆ ಹತ್ತಿರ ಇರುವ ಕಾರಣ ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಎಂಎಲ್ ಸಿ ಟಿಕೇಟ್ ಕೊಟ್ಟಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಬದ್ದವಾದ ಪಕ್ಷ. ವಿಜಯೇಂದ್ರ ಅವರನ್ನು ಗುರುತಿಸುವ ಕೆಲಸ ಪಕ್ಷ ಮಾಡಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರರಿಗೆ ಅವಕಾಶ ಕಲ್ಪಿಸಬೇಕೆಂದು ಪಕ್ಷದ ಚಿಂತನೆಯಾಗಿದೆ ಎಂದ ಸಚಿವ ರಾಮುಲು, ವಿಜಯೇಂದ್ರ ಕೇವಲ ವಿಧಾನ ಪರಿಷತ್ ಗೆ ಇರಬೇಕೆಂದು ಆಸೆ ಪಟ್ಟಿಲ್ಲ. ಶಾಸಕರಿಂದ ಆಯ್ಕೆಯಾಗೊದು ಬೇಡ, ಅವರು ಜನರ ಮಧ್ಯದಿಂದ ಆಯ್ಕೆಯಾಗಬೇಕು. ಬಿಎಸ್ ವೈ ಹೋರಾಟವನ್ನು ಪಕ್ಷ ಮರೆಯೋದಿಲ್ಲ ಎಂದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ