Breaking News

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಇನ್ಮುಂದೆ ಇಳಕಲ್ ಸೀರೆ ಸಿಗುತ್ತೆ

Spread the love

ಹುಬ್ಬಳ್ಳಿ: ನಗರದ ಸಿದ್ಧಾರೂಢ ರೈಲ್ವೆ ನಿಲ್ದಾಣದಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ಸೀರೆ ಪ್ರದರ್ಶನ ಮತ್ತು ಮಳಿಗೆ ತೆರೆಯಲಾಗಿದೆ. ಈ ಮಳಿಗೆಗಳಿಗೆ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಚಾಲನೆ ನೀಡಿದರು.

ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ಬಜೆಟ್‍ನಲ್ಲಿ ಸ್ಥಳೀಯ ಉತ್ಪನ್ನಗಳು, ಕುಶಲಕರ್ಮಿಗಳು ಮತ್ತು ಕೈಗಾರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತಂದಿದೆ. ಒಂದು ನಿಲ್ದಾಣ-ಒಂದು ಉತ್ಪನ್ನ ಎಂಬ ಕಾರ್ಯಕ್ರಮದಡಿ ನೈರುತ್ಯ ರೈಲ್ವೆ ನಿಲ್ದಾಣದಲ್ಲಿ 4ನೇ ಸ್ಥಳೀಯ ಉತ್ಪನ್ನಗಳಲ್ಲಿ ಒಂದಾದ ಇಳಕಲ್ ಸೀರೆಯ ಮಳಿಗೆ ಆರಂಭಿಸಿಲಾಗಿದೆ. ಮೇ 25 ರಿಂದ ಜೂನ್ 7 ರವರೆಗೆ ಪ್ರದರ್ಶನ ಇರಲಿದೆ.

ಸಂಜೀವ್ ಕಿಶೋರ್ ಅವರು ಈ ಕುರಿತು ಮಾತನಾಡಿದ್ದು, ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‍ನಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹಿಸುವ ಮತ್ತು ಹೆಚ್ಚು ಪ್ರಚಾರ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತಂದಿದೆ. ಪ್ರತಿ ನಿತ್ಯ ರೈಲ್ವೆ ನಿಲ್ದಾಣಕ್ಕೆ ಅನೇಕ ಜನರು ಭೇಟಿ ನೀಡುತ್ತಾರೆ. ಈ ಹಿನ್ನೆಲೆ ಇಳಕಲ್ ಸೀರೆಯನ್ನು ರೈಲ್ವೆ ನಿಲ್ದಾಣದಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಮಳಿಗೆ ಸ್ಥಾಪನೆಯಿಂದ ಸಾರ್ವಜನಿಕರಿಗೆ ಸ್ಥಳೀಯ ಉತ್ಪನ್ನಗಳ ಬಗ್ಗೆ ತಿಳಿಸಿಕೊಳ್ಳಲು ಮತ್ತು ಖರೀದಿಸಲು ಅನುಕೂಲವಾಗುತ್ತದೆ. ನಿಜವಾಗಲೂ ಒಂದು ಉತ್ತಮ ಯೋಜನೆ ಇದಾಗಿದೆ ಎಂದು ಹೇಳಿದರು. 


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ