Breaking News

ಬೆಂಗಳೂರಲ್ಲಿ ಸ್ಕೂಲ್​ ಬಸ್​ ಅಪಘಾತ: ಕಾಲೇಜಿಗೆ ಸೇರಲು ಹೊರಟ್ಟಿದ್ದ ಬಾಲಕಿ ಸ್ಥಳದಲ್ಲೇ ಸಾವು

Spread the love

ಬೆಂಗಳೂರು: ಖಾಸಗಿ ಸ್ಕೂಲ್​ ಬಸ್​ ಮತ್ತು ಬೈಕ್​ ನಡುವೆ ನಗರದ ಬನಶಂಕರಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, 16 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಹಾರೋಹಳ್ಳಿಯ ಕೀರ್ತನ ಮೃತ ದುರ್ದೈವಿ. ಇತ್ತೀಚಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದ ಕೀರ್ತನ ಮತ್ತು ಹರ್ಷಿತಾ ಇಬ್ಬರೂ ಕನಕಪುರ ರಸ್ತೆಯ ನೆಟ್ಟಿಗೆರೆ ಬಳಿಯ ಅಕ್ಕನ ಮನೆಗೆ ಬುಧವಾರ ತೆರಳಿದ್ದರು.

ಗುರುವಾರ ಬೆಳಗ್ಗೆ ನಾಗರಬಾವಿಯ ಸರ್ಕಾರಿ ಕಾಲೇಜಿಗೆ ಸೇರಲೆಂದು ಸ್ನೇಹಿತ ದರ್ಶನ್​ನ ಬೈಕ್​ನಲ್ಲಿ ತ್ರಿಬಲ್​ ರೈಡಿಂಗ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬನಶಂಕರಿಯ ಕಿತ್ತೂರು ರಾಣಿ ಚೆನ್ನಮ್ಮ ಫ್ಲೈ ಓವರ್ ಬಳಿ ವೇಗವಾಗಿ ಬಂದ ಡೆಲ್ಲಿ ಪಬ್ಲಿಕ್ ಶಾಲೆಯ ವ್ಯಾನ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ