Breaking News

ಪೋಷಕರಿಗೆ ಕಿರುಕುಳ ನೀಡುವ ಮಕ್ಕಳನ್ನು ಮನೆಯಿಂದ ಹೊರಹಾಕಿ ಎಂದ ಕೋರ್ಟ್

Spread the love

ಡೆಹ್ರಾಡೂನ್: ಪೋಷಕರಿಗೆ ಕಿರುಕುಳ ನೀಡುವ ಮತ್ತು ನಿಂದಿಸುವ ಮಕ್ಕಳನ್ನು ಮನೆಯಿಂದ ಹೊರಹಾಕಬೇಕು ಎಂದು ಹರಿದ್ವಾರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ (SDM) ನ್ಯಾಯಾಲಯ ಹೇಳಿದೆ.

ಪೋಷಕರಿಗೆ ಕಿರುಕುಳ ನೀಡುವ ಮಕ್ಕಳು ಒಂದೇ ತಿಂಗಳಲ್ಲಿ ಮನೆ ಖಾಲಿ ಮಾಡಬೇಕು. ಒಂದು ವೇಳೆ ಆದೇಶ ಪಾಲಿಸದಿದ್ದರೆ ಪೊಲೀಸರು ಕ್ರಮ ಕೈಗೊಳ್ಳುವಂತೆ ಹರಿದ್ವಾರ ಎಸ್‌ಡಿಎಂ ನ್ಯಾಯಾಲಯ ಸೂಚಿಸಿದೆ. 

ಉತ್ತರಾಖಂಡ ಹರಿದ್ವಾರದ ಜ್ವಾಲಾಪುರ, ಕಂಖಾಲ್ ಮತ್ತು ರಾವ್ಲಿ ಮೆಹದುದ್ ಸೇರಿ 6 ವೃದ್ಧ ದಂಪತಿ ತಮ್ಮ ಮಕ್ಕಳೇ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು. 

 

ಮಕ್ಕಳು ತಮ್ಮೊಂದಿಗೆ ವಾಸಿಸುತ್ತಿದ್ದರೂ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ನಮ್ಮ ಆರೋಗ್ಯ ಮತ್ತು ಆಹಾರದ ಬಗ್ಗೆ ಗಮನ ಹರಿಸುವುದಿಲ್ಲ. ಆಗಾಗ್ಗೆ ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಇದರಿಂದ ನಮ್ಮ ಜೀವನ ನರಕವಾಗಿದೆ. ಆದ್ದರಿಂದ ಪೋಷಕರ ಸ್ಥಿರ ಮತ್ತು ಚರಾಸ್ತಿಗಳಿಂದ ಮಕ್ಕಳನ್ನು ಹೊರ ಹಾಕಬೇಕೆಂದು ಮನವಿಯಲ್ಲಿ ಕೋರಿದ್ದರು.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ