Breaking News

ಆಡಿದ್ದು ಸಾಕು, ಮೊದಲು ಸ್ಟೇಡಿಯಂನಿಂದ ಆಚೆ ನಡೆಯಪ್ಪ: ಆರ್‌ಸಿಬಿ ಸ್ಟಾರ್ ಪ್ಲೇಯರ್ ವಿರುದ್ಧ ಫ್ಯಾನ್ಸ್ ಕಿಡಿ!

Spread the love

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಪಯಣವನ್ನು ಮುಗಿಸಿದ್ದು, ಟೂರ್ನಿಯಿಂದ ಹೊರಬಿದ್ದಿದೆ.

 

ಹೌದು, ಇಂದು ( ಮೇ 27 ) ಅಹಮದಾಬಾದಿನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪ್ರತಿಷ್ಟಿತ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ 7 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿದೆ.

 

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ 14 ಆವೃತ್ತಿಗಳಂತೆ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿಯೂ ಟ್ರೋಫಿ ಇಲ್ಲದೇ ಬರಿಗೈನಲ್ಲಿ ಟೂರ್ನಿಯಿಂದ ಹೊರಬಿದ್ದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಾಳಿ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 158 ರನ್‌ಗಳ ಗುರಿಯನ್ನು ನೀಡಿತು. ರಾಜಸ್ಥಾನ್ ರಾಯಲ್ಸ್ ತಂಡದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಉತ್ತಮ ಬೌಲಿಂಗ್ ಮಾಡಿ ಈ ಮೊತ್ತವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಹಲವಾರು ಅಭಿಮಾನಿಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‌ಗಳ ಮೇಲೆ ಭರವಸೆಯನ್ನು ಇಟ್ಟುಕೊಂಡಿದ್ದರು. ಆದರೆ ಅಭಿಮಾನಿಗಳ ಈ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲನ್ನು ಅನುಭವಿಸಿ ನಿರಾಸೆಯನ್ನು ಉಂಟುಮಾಡಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ