ಮೈಸೂರು: ಫಾಸ್ಟ್ ಹಾಗೂ ಬ್ಯೂಸಿ ಲೈಫ್ ಇಂದಿನ ಯುವ ದಂಪತಿಗಳು ರೆಡಿ ಟು ಈಟ್ ಫುಡ್ ಗಳ ಮೇಲೆ ಅವಲಂಬಿತರಾಗುತ್ತಿರುವುದು ಹೆಚ್ಚಾಗಿದೆ. ಆದರೆ, ಈ ಬೆಳವಣಿಗೆ ಕೆಲವರಲ್ಲಿ ಕಸಿವಿಸಿಯುಂಟು ಮಾಡಿದೆ. ಪತಿಯೊಬ್ಬ ತನ್ನ ಪತ್ನಿ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ಎಲ್ಲೆಲ್ಲೂ ಮ್ಯಾಗಿ ಮಾಡಿ ಹಾಕುತ್ತಿದ್ದಾಳೆಂದು ಬೇಸತ್ತ ಪತಿಯೊಬ್ಬ ಪತ್ನಿಗೆ ವಿಚ್ಛೇದನ ನೀಡಿದ್ದಾನೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಂ.ಎಲ್.ರಘುನಾಥ್, ಸಣ್ಣಪುಟ್ಟ ವಿಚಾರಗಳಿಗೆ ದಂಪತಿಗಳು ವಿವಾಹ ವಿಚ್ಛೇದನ ಪಡೆಯುವ ವೈವಾಹಿಕ ಪ್ರಕರಣಗಳ ಕುರಿತು ಮಾತನಾಡಿದ್ದಾರೆ.
ಬಳ್ಳಾರಿಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿದ್ದಾಗ ಈ ಪ್ರಕರಣ ಕಂಡು ಬಂದಿತ್ತು. ಮ್ಯಾಗಿ ನೂಡಲ್ಸ್ ಹೊರತುಪಡಿಸಿ ಬೇರೆ ಯಾವುದೇ ಅಡುಗೆ ಮಾಡಲು ನನ್ನ ಹೆಂಡತಿಗೆ ಗೊತ್ತಿಲ್ಲ, ಉಪಹಾರ, ಮಧ್ಯಾಹ್ನ ಊಟ ಹಾಗೂ ರಾತ್ರಿ ಊಟಕ್ಕೆಲ್ಲಾ ಮ್ಯಾಗಿ ನೂಡೆನ್ಸ್ ಮಾಡುತ್ತಿದ್ದಳು. ಪ್ರಾವಿಷನ್ ಸ್ಟೋರ್’ಗೆ ಹೋದರೆ ಆಕೆ ಕೇವಲ ಇನ್ಸ್ಟಂಟ್ ನೂಡಲ್ಸ್ ಮಾತ್ರ ತರುತ್ತಿದ್ದಳು ಎಂದು ವ್ಯಕ್ತಿ ಹೇಳಿಕೊಂಡಿದ್ದ. ಈ ಕೇಸ್’ಗೆ ಮ್ಯಾಗಿ ಕೇಸ್ ಎಂದು ಹೆಸರಿಡಲಾಗಿತ್ತು. ವಾದ ಪ್ರತಿವಾದದ ಬಳಿಕ ಅಂತಿಮವಾಗಿ ದಂಪತಿಗಳು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದರು ಎಂದು ಹೇಳಿದ್ದಾರೆ.
ವೈವಾಹಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದು ಸ್ವಲ್ಪ ಕಷ್ಟ. ದಂಪತಿಗಳು ತಮ್ಮ ಮಕ್ಕಳ ಭವಿಷ್ಯವನ್ನು ಪರಿಗಣಿಸಿದರೆ ಹೆಚ್ಚಿನ ಪುನರ್ಮಿಲನಗಳು ಸಂಭವಿಸುತ್ತವೆ. ‘ಜೋಡಿಗಳ ನಡುವೆ ರಾಜಿ ತರಲು ಮತ್ತು ಅವರನ್ನು ಮತ್ತೆ ಒಂದುಗೂಡಿಸಲು ನಾವು ಭಾವನೆಗಳನ್ನು ಬಳಸುತ್ತೇವೆ. ಇಲ್ಲಿ ದೈಹಿಕ ಸಮಸ್ಯೆಗಳಿಗಿಂತ ಮಾನಸಿಕ ಸಮಸ್ಯೆಗಳು ಹೆಚ್ಚು ಕೆಲಸ ಮಾಡುತ್ತವೆ. ಹೆಚ್ಚಿನ ಸಂದರ್ಭಗಳಲ್ಲಿ, ದಂಪತಿಗಳು ಮತ್ತೆ ಒಂದಾದರೂ, ಮನಸ್ತಾಪಗಳ ಗುರುತುಗಳು ಹಾಗೆಯೇ ಉಳಿಯುತ್ತವೆ. 800-900 ವೈವಾಹಿಕ ಪ್ರಕರಣಗಳಲ್ಲಿ, ನಾವು ಸುಮಾರು 20-30 ಪ್ರಕರಣಗಳಲ್ಲಿ ಯಶಸ್ವಿಯಾಗುತ್ತೇವೆ. ಹಿಂದಿನ ಲೋಕ ಅದಾಲತ್ನಲ್ಲಿ ಸುಮಾರು 110 ವಿಚ್ಛೇದನ ಪ್ರಕರಣಗಳಲ್ಲಿ ಕೇವಲ 32 ಪ್ರಕರಣಗಳಲ್ಲಿ ಪುನರ್ಮಿಲನ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು ಜಿಲ್ಲೆಯು ಐದು ಕೌಟುಂಬಿಕ ನ್ಯಾಯಾಲಯಗಳನ್ನು ಹೊಂದಿದ್ದು, ಪ್ರತಿಯೊಂದು ನ್ಯಾಯಾಲಯವು ಸುಮಾರು 500 ವೈವಾಹಿಕ ಪ್ರಕರಣಗಳನ್ನು ಹೊಂದಿದೆ. ಅವುಗಳಲ್ಲಿ ಸುಮಾರು 800 ಪ್ರಕರಣಗಳು ವಿಚ್ಛೇದನಕ್ಕಾಗಿಯೇ ಆಗಿವೆ.