Breaking News

ಯಡಿಯೂರಪ್ಪ ನಂಬಿಕೆಗೆ ಬಸವರಾಜ ಬೊಮ್ಮಾಯಿ ದ್ರೋಹ

Spread the love

RSSನ ಬಲವಂತವಾದ ಕೋಮುವಾದದ ತಂತ್ರಗಳಿಗೆ ಬಗ್ಗದ ಯಡಿಯೂರಪ್ಪ ಅವರನ್ನು ನಿರ್ದಯವಾಗಿ ಕೆಳಗೆ ಇಳಿಸಿದ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು, ಇದೀಗ ಬೊಮ್ಮಾಯಿ ಅವರನ್ನು ಸಂಪೂರ್ಣ RSS ಗುಲಾಮಗಿರಿಗೆ ಒಳಪಡಿಸಿದ್ದಾರೆ.

ತಮ್ಮ ಮೆದುಳು ಮತ್ತು ಪಂಚೇಂದ್ರಿಯಗಳನ್ನು RSS ನವರಿಗೆ ಕೊಟ್ಟು ಕುಳಿತಿರುವ ಬೊಮ್ಮಾಯಿ ಅವರು ತಾವೊಬ್ಬ ಆರ್ ಎಸ್ ಎಸ್ ನ ತೊಗಲು ಗೊಂಬೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

ಇನ್ನು ಹಾಸ್ಯಾಸ್ಪದ ಎಂಬಂತೆ ಬೊಮ್ಮಾಯಿಯವರು ನೀವು ಆರ್ಯರೋ ದ್ರಾವಿಡರೋ ಎಂದು ಪ್ರಶ್ನೆ ಕೇಳುತ್ತಿದ್ದಾರೆ.

 

ಮೂಲತಃ ಸಿರಿಗೆರೆಯ ಮರುಳ ಸಿದ್ದೇಶ್ವರ ಸ್ವಾಮಿಗೆ ನಡೆದುಕೊಳ್ಳುವ ಇವರು ಮೂಲತಃ ದ್ರಾವಿಡರೇ ಆಗಿದ್ದು ಆ ಸಂಗತಿಯನ್ನು ಬೇಕಾದರೆ ಸಿರಿಗೆರೆ ಶ್ರೀಗಳ ಬಳಿಯೇ ಕೇಳಿ ಖಚಿತ ಪಡಿಸಿಕೊಳ್ಳಲಿ. ಅನ್ನಭಾಗ್ಯ ಅಕ್ಕಿಯನ್ನು ಕಡಿತಗೊಳಿಸಿ ತಿನ್ನುವ ಅನ್ನಕ್ಕೆ ಕನ್ನ ಹಾಕಿರುವ ಬಿಜೆಪಿಗರು, ಯುವಕರ ಉದ್ಯೋಗವನ್ನು ಕಿತ್ತುಕೊಳ್ಳುವ ಕೆಲಸ ಮಾಡಿದ್ದಾರೆ.

ಸಾಲದು ಎಂಬಂತೆ ಹಗಲು ಇರುಳೂ ಓದುವ ಮಕ್ಕಳ ಶಾಲೆಯ ಮತ್ತು ಪಠ್ಯದ ವಾತಾವರಣ ಹಾಳು ಮಾಡುತ್ತಿರುವ ಬಿಜೆಪಿಗರು ಬಹುತೇಕ ಬಡವರು ಓದುವ ಸರ್ಕಾರಿ ಶಾಲೆಗಳನ್ನು ಹಿಜಾಬ್ ಹಾಗೂ ಇನ್ನಿತರೆ ಕೋಮು ಸಂಗತಿಗಳನ್ನು ಮುನ್ನಲೆಗೆ ತರುವ ಮೂಲಕ ಪೂರ್ಣವಾಗಿ ಹಾಳು ಮಾಡುತ್ತಿದ್ದು ಕೆಳವರ್ಗದ ಮಕ್ಕಳು ಶಿಕ್ಷಣ ಪಡೆಯಬಾರದು ಎಂಬ ಹುನ್ನಾರವನ್ನು ಅದು ಹೊಂದಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ