Breaking News

ಬಿಜೆಪಿ ನಿರ್ಣಯಗಳಲ್ಲಿ ಬಿ.ಎಲ್.ಸಂತೋಷ್ ಮತ್ತೆ ಮೇಲುಗೈ

Spread the love

ಬೆಂಗಳೂರು : ರಾಜ್ಯಸಭೆಯ ಅಭ್ಯರ್ಥಿಯಾಗಿ ಜಗ್ಗೇಶ್ ಅಚ್ಚರಿ ಆಯ್ಕೆ, ವಿಧಾನಪರಿಷತ್ ಚುನಾವಣೆಯಲ್ಲಿ ” ವಂಶವಾದ” ಕ್ಕೆ ಅವಕಾಶವಿಲ್ಲ ಎಂಬ ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ಪಟ್ಟು ಸೇರಿದಂತೆ ರಾಜ್ಯ ಬಿಜೆಪಿಯ ಪ್ರಭಾ ವಲಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ನಿರ್ಧಾರಗಳೇ ಈಗ ಮೇಲುಗೈ ಪಡೆದುಕೊಂಡಿದೆ.

 

ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಒಂದು ವಿಚಾರದ ಚರ್ಚೆ ಪ್ರಾರಂಭಗೊಂಡಿತ್ತು. ಅದರಲ್ಲೂ ವಿಶೇಷವಾಗಿ ಜಗನ್ನಾಥ ಭವನದ ಸುತ್ತಮುತ್ತ ಪಿಸುಮಾತಿನಲ್ಲಿ ಕಾಲಕಳೆಯುವ ಗುಂಪಿನ ಮಧ್ಯೆ ಈ ಸಂಗತಿ ಕೆಲ ದಿನಗಳ ಕಾಲ ಹಾಟ್ ಟಾಪಿಕ್ ಆಗಿ ಚಾಲ್ತಿಯಲ್ಲಿತ್ತು. ‘ಈ ಬಾರಿ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತದೆ ಎಂಬುದು ಸಂತೋಷ್ ಜಿ ಹಾಗೂ ಹೈಕಮಾಂಡ್ ನಡುವಿನ ವಿಶ್ವಾಸದ ಮಟ್ಟದ ಅಳತೆಗೋಲಾಗಲಿದೆ. ದಿಲ್ಲಿ ಮೂಲಗಳ ಪ್ರಕಾರ ಸಂತೋಷ್ ಜಿ ಬಗ್ಗೆ ಮೋದಿ ಹಾಗೂ ಅಮಿತ್ ಶಾ ಅವರಿಗೆ ಹಳೆಯ ವಿಶ್ವಾಸ ಉಳಿದಿಲ್ಲ. ಹೀಗಾಗಿ ಸಂತೋಷ್ ಜಿ ಅವರ ಶಿಫಾರಸ್ಸಿಗೆ ಈ ಬಾರಿ ಒಪ್ಪಿಗೆ ಸಿಗುವುದು ಅನುಮಾನ’ ಎಂಬ ವ್ಯಾಖ್ಯಾನಗಳು ಈ ಗುಂಪು ಚರ್ಚೆಯಲ್ಲಿ ವ್ಯಕ್ತವಾಗುತ್ತಿತ್ತು. ಆದರೆ ವಾಸ್ತವಕ್ಕೂ, ಪಕ್ಷದ ವಲಯದಲ್ಲಿ ಸುಳಿಯುವ ಗಾಳಿ ಸುದ್ದಿಗಳಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂಬುದು ಈಗ ಮತ್ತೆ ಸಾಬೀತಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ