Breaking News

ಬೆಳಗಾವಿಯಲ್ಲಿ ಮಂದಿರ ವರ್ಸೆಸ್ ಮಸೀದಿ ವಿವಾದ ತಾರಕಕ್ಕೇ

Spread the love

ಬೆಳಗಾವಿಯಲ್ಲಿ ಮಂದಿರ ವರ್ಸೆಸ್ ಮಸೀದಿ ವಿವಾದ ತಾರಕಕ್ಕೇರಿದ್ದು, ಬಿಜೆಪಿ ಸರ್ಕಾರ ಬೆಲೆಏರಿಕೆ ನಿಯಂತ್ರಿಸಲು ವಿಫಲವಾದ ಹಿನ್ನೆಲೆಯಲ್ಲಿ ಇದನ್ನು ಮುಚ್ಚಿಡಲು ಮಂದಿರ ಮಸೀದಿ ವಿವಾದಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ದಸ್ತಗೀರ್ ಅಗಾ ಹೇಳಿದ್ದಾರೆ.

ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ದಸ್ತಗೀರ್ ಅಗಾ, ಬಾಪಟ್ ಗಲ್ಲಿಯಲ್ಲಿರುವ ಶಾಹಿ ಮಸೀದಿ ಬ್ರಾಹ್ಮಣರು ಮುಸ್ಲಿಮರು ಸೇರಿ ಕಟ್ಟಿದ್ದಾರೆ. ಬಿಜೆಪಿ ಸರ್ಕಾರ ದೇಶ ಹಾಗೂ ರಾಜ್ಯದಲ್ಲಿ ಬೆಲೆಏರಿಕೆ ನಿಯಂತ್ರಿಸಲು ವಿಫಲವಾಗಿದೆ. ತೈಲ ಏರಿಕೆ, ನಿರುದ್ಯೋಗ ಸಮಸ್ಯೆ ನಿವಾರಿಸಲು ವಿಫಲವಾಗಿದೆ. ಇದನ್ನ ಮುಚ್ಚಿಡಲು ಮಂದಿರ ಮಸೀದಿ ವಿವಾದ ಮುಂದಿಡುತ್ತಿದ್ದಾರೆ. ಇದು ಎಲ್ಲರಿಗೋ ಗೊತ್ತಿರುವ ವಿಚಾರ. ಹಾಗಾಗಿ ಹಿಂದೂ ಹಾಗೂ ಮುಸಲ್ಮಾನ್ ಬಾಂಧವರು ಯಾರೂ ಕೂಡ ಇದರಲ್ಲಿ ಭಾಗಿಯಾಗಬಾರದೆಂದು ಮನವಿ ಮಾಡಿದರು.

ಇನ್ನು ಅಭಯ್ ಪಾಟೀಲ್ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯ ಲಾಭಕ್ಕಾಗಿ ಶಾಸಕ ಅಭಯ್ ಪಾಟೀಲ್ ಆರೋಪ ಮಾಡುತ್ತಿದ್ದಾರೆ. 10 ತಿಂಗಳಲ್ಲಿ ಚುನಾವಣೆ ಬರುವುದಿದೆ ಹೀಗಾಗಿ ಇಂತಹ ವಿಚಾರ ಮುಂದೆ ತರುತ್ತಿದ್ದಾರೆ. ಬಾಪಟ್ ಅನ್ನೋದು ಬ್ರಾಹ್ಮಣರ ಮನೆತನದ ಹೆಸರು. ಬಾಪಟ್ ಗಲ್ಲಿಯಲ್ಲಿ ಮೊದಲು ವಾತಾವರಣ ಬಹಳ ಕೆಟ್ಟ ಇತ್ತು. ಕೆಟ್ಟ ವಾತಾವರಣ ಅಳಸಿ ಹಾಕಲು ಎಲ್ಲರೂ ಪ್ರಯತ್ನಿಸಿದ್ದರು. ಬ್ರಾಹ್ಮಣರು ಮುಸ್ಲಿಮರು ಸೇರಿ ಶಾಹಿ ಮಸೀದಿ ಕಟ್ಟಿದ್ದಾರೆ. ಭಾರತೀಯ ಶಿಲ್ಪಿಗಳು ಈ ಮಸೀದಿಯನ್ನು ಕಟ್ಟಿದ್ದಾರೆ ಎಂದರು.

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ