Breaking News

ಗೋಕಾಕ್ R.T.O.ಕಚೇರಿಯಲ್ಲಿ ಏಜೆಂಟರುಗಳ ಹಾವಳಿ ಹೆಚ್ಚಾಗಿದೆ.: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್

Spread the love

ಗೋಕಾಕ್ ಆರ್‍ಟಿಓ ಕಚೇರಿಯಲ್ಲಿ ಏಜೆಂಟರುಗಳ ಹಾವಳಿ ಹೆಚ್ಚಾಗಿದೆ. ಇಲ್ಲಿಗೆ ಬರುವ ಸಾರ್ವಜನಿಕರಿಂದ ಹಣವನ್ನು ಸುಲಿಗೆ ಮಾಡಲಾಗುತ್ತಿದ್ದು, ಲಂಚಾವತಾರ ಹೆಚ್ಚಾಗುತ್ತಿದೆ. ಹಾಗಾಗಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್ ತಾಲೂಕಾ ಘಟಕದಿಂದ ಆರ್‍ಟಿಒ ರವರಿಗೆ ಮನವಿ ಮಾಡಿದರು.

ಗೋಕಾಕ್‍ನ ಆರ್‍ಟಿಒ ಕಚೇರಿಯಲ್ಲಿ ದಿನದಿಂದ ದಿನಕ್ಕೆ ಏಜೆಂಟರ ಹಾವಳಿ ಹೆಚ್ಚಾಗುತ್ತಿದೆ. ಸಾರ್ವಜನಿಕರ ಕೆಲಸವಾಗಬೇಕಾದರೆ ಇಲ್ಲಿ ಹೆಚ್ಚಿನ ಹಣವನ್ನು ಸಾರ್ವಜನಿಕರಿಂದ ಏಜೆಂಟರು ಪೀಕುತ್ತಿದ್ದಾರೆ. ಇದರಿಂದ ಲಂಚಾವತಾರ ಹೆಚ್ಚಾಗುತ್ತಿದೆ. ಇನ್ನು ಬಡವರು ಲೈಸೆನ್ಸ್ ಹೊಂದುವುದು ಕನಸಾಗಿಯೇ ಉಳಿಯುತ್ತಿದೆ. ಇದರಿಂದ ಎಷ್ಟೋ ಜನ ಲೈಸೆನ್ಸ್ ಇಲ್ಲದೇ ವಾಹನಗಳನ್ನು ಓಡಿಸುತ್ತಿದ್ದಾರೆ. ಇದರಿಂದ ಸರಕಾರ ವ್ಯವಸ್ಥೆಯೇ ಬುಡಮೇಲಾಗುತ್ತಿದೆ.

ಹಾಗಾಗಿ ಕೂಡಲೇ ಇಂಥ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ಆರ್‍ಟಿಒ ರವರಿಗೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ