ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ವಿವಾದ ಮಾಡಿಕೊಂಡಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ರೋಹಿತ್ ಚಕ್ರತೀರ್ಥ ಸಮಿತಿಯು ಬಸವಣ್ಣನವರ ಪಠ್ಯದ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಕುರಿತ ಪಠ್ಯದಲ್ಲೂ ವಿವಾದ ಮಾಡಿಕೊಂಡಿದ್ದು, ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಅವರಿಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದೆ.
ರೋಹಿತ್ ಚಕ್ರತೀರ್ಥ ಸಮಿತಿಯ ನೇತೃತ್ವದಲ್ಲಿ ನಡೆದ ಪಠ್ಯ ಪರಿಷ್ಕರಣೆಯಲ್ಲಿ 9 ನೇ ತರಗತಿ ನಮ್ಮ ಸಂವಿಧಾನ ಪಾಠದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗಿದ್ದ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದೆ. ಪಾಠದಲ್ಲಿ ಸಂವಿಧಾನದ ಕರುಡು ರಚನಾ ಸಮಿತಿ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ ಪಾಠದಲ್ಲೂ ಎಲ್ಲೂ ಸಂವಿಧಾನ ಶಿಲ್ಪಿ ಎಂದು ಹೇಳಿಲ್ಲ. ಇದು ಸದ್ಯ ವಿವಾದಕ್ಕೆ ಕಾರಣವಾಗಿದೆ.