Breaking News

ಆಧುನಿಕ ಶೈಲಿಯಲ್ಲಿ ರೈತರ ಸಹಾಯಕ್ಕೆ ಮುಂದಾದ ಧೋನಿ.

Spread the love

ಚೆನ್ನೈ(ತಮಿಳುನಾಡು): ಟೀಂ ಇಂಡಿಯಾ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಂಡು ಈಗಾಗಲೇ ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಒಲವು ಹೊಂದಿರುವ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.

ಆಧುನಿಕ ಶೈಲಿಯಲ್ಲಿ ರೈತರಿಗೆ ಸಹಾಯ ಮಾಡಲು ಮುಂದಾಗಿರುವ ಅವರು, ಮಹತ್ವದ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಇಂಡಿಯನ್​ ಗರುಡ ಡ್ರೋನ್ ಕಂಪನಿಯಲ್ಲಿ ಶೇರ್​ ಖರೀದಿಸಿರುವ ಮಾಹಿ, ರೈತರಿಗೆ ನೆರವಾಗಲು ನಿರ್ಧಾರ ಕೈಗೊಂಡಿದ್ದಾರೆ.

ಗರುಡ ಕಂಪನಿಯ ಡ್ರೋನ್​​ಗಳು ರೈತರಿಗೆ ಸಹಕಾರಿಯಾಗಿದ್ದು, ಅವುಗಳ ಸಹಾಯದಿಂದ ಕೀಟನಾಶಕ, ಕಳೆನಾಶಕ, ನೀರು, ರಸಗೊಬ್ಬರವನ್ನ ಸುಲಭವಾಗಿ ಬೆಳೆಗಳಿಗೆ ಹಾಕಬಹುದಾಗಿದೆ. ಕಡಿಮೆ ಸಮಯದಲ್ಲಿ ಹೆಚ್ಚಿನ ಜಮೀನಿಗೆ ರಸಗೊಬ್ಬರ, ಕೀಟನಾಶಕ ಸಿಂಪಡಣೆ ಮಾಡಲು ಈ ಡ್ರೋನ್​ಗಳು ಸಹಕಾರಿಯಾಗಿದ್ದು, ಧೋನಿ ಇದೀಗ ಶೇರ್ ಹೋಲ್ಡರ್​ ಆಗಿದ್ದಾರೆ.

ಗರುಡ ಏರೋಸ್ಪೇಸ್​​ನ ಷೇರುದಾರರ ಜೊತೆ ಬ್ರಾಂಡ್​ ಅಂಬಾಸಿಡರ್​ ಆಗಿರುವ ಧೋನಿ, ರೈತರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಗರುಡ ಕಂಪನಿಯಲ್ಲಿ ಧೋನಿ ಎಷ್ಟೊಂದು ಹಣ ಹೂಡಿಕೆ ಮಾಡಿದ್ದಾರೆಂಬುದರ ಬಗ್ಗೆ ಯಾವುದೇ ರೀತಿಯ ವಿವರವಾದ ಮಾಹಿತಿ ಲಭ್ಯವಾಗಿಲ್ಲ. ಆದರೆ, ಗರುಡ ಎರೋಸ್ಪೇಸ್​​ನ ಭಾಗವಾಗಲು ನನಗೆ ಸಂತೋಷವಾಗುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆಂದು ಕಂಪನಿ ಪ್ರಕಟಣೆ ಹೊರಡಿಸಿದೆ. ಗರುಡ ಕಂಪನಿಯ 300 ಡ್ರೋನ್​​ಗಳು ಈಗಾಗಲೇ 26 ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕಾಗಿ 500 ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ.


Spread the love

About Laxminews 24x7

Check Also

ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ:C.M.

Spread the love ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ